Monday, March 10, 2025
Monday, March 10, 2025

ಮಂಕಿಪಾಕ್ಸ್ ಸಾಂಕ್ರಾಮಿಕ ರೋಗವೆಂದು ವಿಶ್ವ ಆರೋಗ್ಯ ನೆಟ್ ವರ್ಕ್ ಹೇಳಿಕೆ

Date:

ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಮಧ್ಯೆ, ಪ್ರಪಂಚದಾದ್ಯಂತ ಮಂಕಿಪಾಕ್ಸ್ ರೋಗದ ಅಪಾಯವೂ ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ನೆಟ್‌ವರ್ಕ್ ಈ ರೋಗವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.
ಅಂಕಿಅಂಶಗಳ ಪ್ರಕಾರ, ಇದುವರೆಗೆ 58 ದೇಶಗಳಲ್ಲಿ 3,417 ರೋಗಿಗಳು ದೃಢಪಟ್ಟಿದ್ದಾರೆ. ಇದರ ಮೊದಲ ಪ್ರಕರಣವನ್ನ ಮೇ 6 ರಂದು ಬ್ರಿಟನ್‌ನಲ್ಲಿ ಪತ್ತೆಹಚ್ಚಲಾಗಿತ್ತು ಎಂದು ತಿಳಿದುಬಂದಿದೆ.

WHN ಎನ್ನುವುದು ಹಲವಾರು ದೇಶಗಳ ನೂರಾರು ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಸಂಪರ್ಕ ಹೊಂದಿರುವ ನೆಟ್‌ವರ್ಕ್ ಆಗಿದೆ. ಇದು ಜಾಗತಿಕ, ರಾಷ್ಟ್ರೀಯ ಮತ್ತು ಸ್ಥಳೀಯ ಮಟ್ಟದಲ್ಲಿ ಸಾಂಕ್ರಾಮಿಕ ರೋಗವನ್ನು ಗುರುತಿಸಿ ಪರಿಹರಿಸುವ ಕೆಲಸ ಮಾಡುತ್ತದೆ.

ಮಂಕಿಪಾಕ್ಸ್ ಅನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಬೇಕೆ ಎಂಬುದರ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಸಭೆ ನಡೆಸಿದೆ. ಹೀಗೆ ಘೋಷಿಸಿದಲ್ಲಿ ಮಂಗನ ಕಾಯಿಲೆಯ ಸೋಂಕನ್ನು ತಪ್ಪಿಸಲು ವಿಶ್ವದಾದ್ಯಂತ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎನ್ನಲಾಗಿದೆ.

WHN ತನ್ನ ಹೇಳಿಕೆಯಲ್ಲಿ WHO ಮಂಕಿಪಾಕ್ಸ್ ಮೇಲೆ ಜಾಗತಿಕ ಕ್ರಮವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಈ ಸೋಂಕಿನಿಂದ ಜಗತ್ತನ್ನು ರಕ್ಷಿಸಲು ಇದು ಸರಿಯಾದ ಸಮಯ ಎಂದು ನೆಟ್ವರ್ಕ್ ಹೇಳಿದೆ.

ಮಂಕಿಪಾಕ್ಸ್ ಯುರೋಪ್ ಸೇರಿದಂತೆ ಅನೇಕ ಖಂಡಗಳಲ್ಲಿ ಹರಡಿದೆ. ಇಲ್ಲಿಯವರೆಗೆ, ಬ್ರಿಟನ್‌ನಲ್ಲಿ ಸುಮಾರು 800 ಪ್ರಕರಣಗಳು ವರದಿಯಾಗಿವೆ. ಯುಕೆ ಹೆಲ್ತ್ ಸೆಕ್ಯುರಿಟಿ ಏಜೆನ್ಸಿ (ಯುಕೆಎಚ್‌ಎಸ್‌ಎ) ಪ್ರಕಾರ, ಯುಕೆಯಲ್ಲಿ ಕೇವಲ 5 ದಿನಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳಲ್ಲಿ 40% ಹೆಚ್ಚಳವಾಗಿದೆ. ಜೂನ್ 16 ರವರೆಗೆ 574 ಪ್ರಕರಣಗಳು ದಾಖಲಾಗಿದ್ದರೆ, ಜೂನ್ 20 ರ ವೇಳೆಗೆ ಈ ಸಂಖ್ಯೆ 793 ಕ್ಕೆ ಏರಿದೆ.

ಯುಕೆ ನಂತರ ಸ್ಪೇನ್, ಜರ್ಮನಿ ಮತ್ತು ಪೋರ್ಚುಗಲ್‌ನಲ್ಲಿ ಮಂಕಿಪಾಕ್ಸ್‌ನ ಹೆಚ್ಚಿನ ಪ್ರಕರಣಗಳಿವೆ. ಇಲ್ಲಿಯವರೆಗೆ ಒಬ್ಬ ರೋಗಿ ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...