Wednesday, March 25, 2026
Wednesday, March 25, 2026

ಜರ್ಮನಿ ಜಿ7 ಶೃಂಗ ಸಭೆ ಭಾಗಿಯಾಗಲು ಪ್ರಧಾನಿ ಮೋದಿ ಪ್ರಯಾಣ

Date:

ಇಂದು ಮತ್ತು ನಾಳೆ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಗೆ ತೆರಳಿದ್ದಾರೆ.

ಒಟ್ಟು 3 ದಿನಗಳ ಪ್ರವಾಸ ಇದಾಗಿದೆ. ಶೃಂಗಸಭೆಯ ನಂತರ ಜೂನ್ 28 ಕ್ಕೆ ಯುಎಇ ಗೂ ಭೇಟಿ ನೀಡಲಿದ್ದಾರೆ.

ಜಿ7 ಶೃಂಗಸಭೆಯಲ್ಲಿ ಮೋದಿ ಅವರು ಜಿ7 ಮತ್ತು ಅತಿಥಿ ರಾಷ್ಟ್ರಗಳೊಂದಿಗೆ ಸಭೆ ನಡೆಸಲಿದ್ದಾರೆ ಮತ್ತು ಸಮಕಾಲೀನ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ನಾನು ಜಿ7 ದೇಶಗಳು, ಜಿ7 ಪಾಲುದಾರ ರಾಷ್ಟ್ರಗಳು ಮತ್ತು ಅತಿಥಿ ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಭಯೋತ್ಪಾದನೆ ನಿಗ್ರಹ, ಲಿಂಗ ಸಮಾನತೆ ಹಾಗೂ ಪ್ರಜಾಪ್ರಭುತ್ವದಂತಹ ಸಾಮಯಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇನೆ. ನಾನು ಜಿ7 ನಾಯಕರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಇನ್ನೂ, ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮೋದಿಯವರು ಜೂನ್ 28ರಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಯಾಣಿಸಲಿದ್ದು, ಯುಎಇಯ ಹೊಸ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಆಯ್ಕೆಯಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸಲಿದ್ದಾರೆ’ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.

ಜಿ7 ಶೃಂಗಸಭೆಯ ಆಹ್ವಾನವು ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಮತ್ತು ನಿಕಟ ಪಾಲುದಾರಿಕೆ ಮತ್ತು ಉನ್ನತ ಮಟ್ಟದ ರಾಜಕೀಯ ಸಂಪರ್ಕಗಳ ಸಂಪ್ರದಾಯಕ್ಕೆ ಅನುಗುಣವಾಗಿದೆ.

ಮೇ 2 ರಲ್ಲಿ ನಡೆದ ಭಾರತ
ಹಾಗೂ ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಗಳ 6ನೇ ಆವೃತ್ತಿಗಾಗಿ ಪ್ರಧಾನಿ ಮೋದಿಯವರು ಜರ್ಮನಿಗೆ ನೀಡಿದ ಕೊನೆಯ ಭೇಟಿಯಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...