Monday, December 15, 2025
Monday, December 15, 2025

ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಧರಣಿ

Date:

ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಶಿವಪ್ಪ ನಾಯಕ ಸರ್ಕಲ್ ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಹಾಗೂ ಯುವಕರ ಆಕ್ರೋಶವನ್ನು ಬೆಂಬಲಿಸಿ ಅಗ್ನಿಪಥ್ ಯೋಜನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ಮಾಡಿದರು.

ಅಗ್ನಿಪಥ್ ಯೋಜನೆ ಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹ ಪಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸುಂದರೇಶ್ ಅವರ ನೇತೃತ್ವದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳ ಉಪಸ್ಥಿತಿಯಲ್ಲಿ ಧರಣಿ ಸತ್ಯಾಗ್ರಹವನ್ನು ಮಾಡಲಾಯಿತು.

ದೇಶಾದ್ಯಂತ ವಿರೋಧಕ್ಕೆ ಕಾರಣವಾಗಿರುವ ಕೇಂದ್ರದ ಬಿಜೆಪಿ ಸರ್ಕಾರದ ನೂತನ ಅಗ್ನಿಪಥ್ ಯೋಜನೆಯ ಕಾಯ್ದೆ ಅಡಿಯಲ್ಲಿ ಅಗ್ನಿ ವೀರರನ್ನು ನಾಲ್ಕು ವರ್ಷಗಳ ಅವಧಿಗೆ
ನೇಮಿಸಿಕೊಳ್ಳಲಾಗುತ್ತದೆ. ವರ್ಷಗಳ ನಿಗದಿತ ಒಪ್ಪಂದದ ಅವಧಿಯನ್ನು ಮೀರಿ ಅಗ್ನಿವೀರರನ್ನು ಮುಂದುವರೆಸುವುದಿಲ್ಲ ಎಂದು ಅಗ್ನಿಪಥ್ ಯೋಜನೆಯ ಕಾಯ್ದೆಯಾಗಿದೆ. ಇದರಿಂದಾಗಿ ಸೇನಾ ಆಕಾಂಕ್ಷಿಗಳಾದ ಯುವಕರು ತೀವ್ರ ಅಸಮಾಧಾನಗೊಂಡು ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಭಾರಿ ಪ್ರತಿಭಟನೆ ಮೂಲಕ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಗಡಿಬಿಡಿಯಲ್ಲಿ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಧರಣಿ ಸತ್ಯಾಗ್ರಹವನ್ನು ನಡೆಸಿದೆ.

ಕೇಂದ್ರದ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲಾಗದೆ ಅಗ್ನಿಪಥ್ ಯೋಜನೆ ಮೂಲಕ ಯುವಕರನ್ನು ಅದರಲ್ಲೂ ಮುಖ್ಯವಾಗಿ ಸೇನಾ ಆಕಾಂಕ್ಷಿಗಳನ್ನು ಬೀದಿಗೆ ತಂದು ಅವರ ಭವಿಷ್ಯದ ಜೊತೆಗೆ ಆಟವಾಡುತ್ತಿದೆ. ಅಗ್ನಿಪಥ್ ಯೋಜನೆ ದೇಶದ ಭದ್ರತೆ ಮತ್ತು ಯುವಕರನ್ನು ಭವಿಷ್ಯಕ್ಕೆ ಮಾರಕವಾಗಿದೆ. ಆದ್ದರಿಂದ ತಕ್ಷಣವೇ ಹಿಂಪಡೆಯಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ಮೂಲಕ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...