Wednesday, October 2, 2024
Wednesday, October 2, 2024

ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿದ ಸರ್ಕಾರ?

Date:

ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್ , ಅಕ್ಕಿ , ಪೆಟ್ರೋಲ್, ಡೀಸೆಲ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಜುಲೈ 1 ರಿಂದ ಮತ್ತೊಂದು ಹೊಡೆತ ಬೀಳಲಿದೆ.
ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ.

ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ ಅವಲಂಬಿತವಾಗಿರುತ್ತದೆ.
ಕಲ್ಲಿದ್ದಲು ದರ ಏರಿಕೆಯಾಗಿದ್ದು, ಇದರ ವೆಚ್ಚವನ್ನು ಗ್ರಾಹಕರಿಂದ ಭರಿಸಲು ಅವಕಾಶ ಕಲ್ಪಿಸುವಂತೆ ಎಸ್ಕಾಂಗಳಿಂದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಪ್ರತಿ ಯೂನಿಟ್ ಗೆ 38 ರಿಂದ 55 ರೂಪಾಯಿ ವಸೂಲಿ ಮಾಡಲು ಎಸ್ಕಾಂಗಳು ಕೋರಿವೆ.
ಈ ಪ್ರಸ್ತಾವನೆಗೆ ವಿದ್ಯುತ್ ನಿಯಂತ್ರಣ ಆಯೋಗ ಅನುಮೋದನೆ ನೀಡಿದ್ದರೂ, ಎಸ್ಕಾಂಗಳು ನಿಗದಿಪಡಿಸಿದ್ದ ದುಬಾರಿ ದರ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಗ್ರಾಹಕರಿಗೆ ದುಬಾರಿ ದರದಿಂದ ಹೊರೆಯಾಗುವ ಕಾರಣಕ್ಕೆ ಎಸ್ಕಾಂಗಳು ನಿಗದಿಪಡಿಸಿದ ದರ ಕಡಿತಗೊಳಿಸಲಾಗಿದೆ.
2022ರ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಆರು ತಿಂಗಳ ಅವಧಿಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ವಸೂಲು ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಹೆಚ್ಚಳವಾಗಲಿದೆ.
ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆಯಾಗಿದ್ದರಿಂದ ಈ ಕ್ರಮ ಕೈಗೊಂಡಿದ್ದು, ಮತ್ತೆ ದರಗಳು ಯಥಾಸ್ಥಿತಿಗೆ ಬರಲಿವೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...