Sunday, May 24, 2026
Sunday, May 24, 2026

ಶೇ40 ಕಮೀಷನ್ ವಿಷಯ ಬಹಿರಂಗಪಡಿಸಲಿ- ಈಶ್ವರಪ್ಪ

Date:

40 ಪರ್ಸೆಂಟ್ ಕಮಿಷನ್ ಕೊಟ್ಟು ಯಾರು ಗುತ್ತಿಗೆಯನ್ನು ಪಡೆದಿದ್ದಾರೆ ಅವರು ನೇರವಾಗಿ ವಿಚಾರ ಬಹಿರಂಗಪಡಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

40 ಪರ್ಸೆಂಟ್ ಕಮಿಷನ್ ಬಗ್ಗೆ ಕೇಂದ್ರದಿಂದ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಯಾವ ಇಲಾಖೆ, ಯಾವ ಮಂತ್ರಿ, ಯಾವ ಶಾಸಕ ಪರ್ಸೆಂಟೇಜ್ ಕೇಳಿದ್ರು ?

ಯಾವ ಗುತ್ತಿಗೆದಾರನಿಗೆ, ಯಾವ ಕಾಮಗಾರಿಗೆ ಕೇಳಿದ್ರು? ಇದರಲ್ಲಿ ಯಾರಾದರೂ ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಸೃಷ್ಟಿಯಾಗಿದೆ. ಆದ್ದರಿಂದ, ಯಾರಾದ್ರೂ ಕಮಿಷನ್ ಕೊಟ್ಟಿದ್ದರೆ ಅದನ್ನು ಮೊದಲು ಬಹಿರಂಗಪಡಿಸಲಿ ಇಲ್ಲವಾದರೆ ಇದು ಕೇವಲ ರಾಜಕೀಯ ವ್ಯಕ್ತಿಗಳ ಹೇಳಿಕೆ ರೀತಿ ಆಗುತ್ತೆ. ಅನ್ಯವ್ಯಕ್ತಿಗಳ ರಾಜಕೀಯ ಕುಮ್ಮಕ್ಕಿನಿಂದ ಪತ್ರ ಬರೆದರಾ ಎಂಬ ಪ್ರಶ್ನೆ ಕೂಡಾ ಜನರಿಗೆ ಎದುರಾಗುತ್ತೆ? ಅಲ್ಲದೆ ರಾಜಕೀಯ ದಾಳಕ್ಕೆ ಗುತ್ತಿಗೆದಾರರ ಸಂಘ ಇದಿಯೋ ಎಂಬ ಅನುಮಾನ ಆರಂಭವಾಗುತ್ತೆ ಎಂದರು.

ಗುತ್ತಿಗೆದಾರರ ಸಂಘದ ಕೆಂಪಣ್ಣ ಬಳಿ ದಾಖಲೆಯಿದೆ ಎಂದು ಬಹಳ ಹಿಂದಿನಿಂದ ಹೇಳ್ತಾ ಇದ್ದಾರೆ. ಈ ಹಿಂದೆ ಸಿಎಂ ಜೊತೆ ಕೂಡಾ ಅವರು ಸಭೆ ನಡೆಸಿದ್ದಾರೆ. ಆಗಲೂ ಕೆಂಪಣ್ಣ ಬಾಯಿ ಬಿಟ್ಟಿಲ್ಲ. ಪ್ರಧಾನಿ ಕಚೇರಿಯಿಂದ ಕರೆ ಬಂದ ಮೇಲೆ ಮತ್ತೆ ವಿಚಾರ ಮುನ್ನೆಲೆಗೆ ಬಂದಿದೆ. ಆದ್ದರಿಂದ, ಯಾರು ಕಮಿಷನ್ ಕೊಟ್ಟು ಕೆಲಸ ಪಡೆದ ಗುತ್ತಿಗೆದಾರರು ವಿಷಯ ಬಹಿರಂಗ ಪಡಿಸಲಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...