Sunday, May 24, 2026
Sunday, May 24, 2026

ರಷ್ಯವನ್ನು ವಿಶ್ವಸಂಸ್ಥೆಯಿಂದ ಹೊರಹಾಕಿ- ಝೆಲೆನ್ಸ್ಕಿ

Date:

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಬ್ಬ ಭಯೋತ್ಪಾದಕ. ಆದ್ದರಿಂದ ವಿಶ್ವಸಂಸ್ಥೆಯಿಂದ ರಷ್ಯಾವನ್ನು ಕೂಡಲೇ ಹೊರಹಾಕುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಒತ್ತಾಯಿಸಿದ್ದಾರೆ.

ಯುಎನ್ ಸೆಕ್ಯುರಿಟಿ ಕೌನ್ಸಿಲ್‌ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನಿಯನ್ ನೆಲದಲ್ಲಿ ರಷ್ಯಾದ ಆಕ್ರಮಣಕಾರರ ಕ್ರಮಗಳನ್ನು ತನಿಖೆ ಮಾಡಲು ಹಾಗೂ ದೇಶವನ್ನು ಹೊಣೆಗಾರರನ್ನಾಗಿ ಮಾಡಲು ಅಂತರರಾಷ್ಟ್ರೀಯ ನ್ಯಾಯಮಂಡಳಿಯನ್ನು ಸ್ಥಾಪಿಸಲು ಯುಎನ್‌ಗೆ ಒತ್ತಾಯಿಸಿದರು.

ನಾವು ರಷ್ಯಾ ನಡೆಸಿದ ಹತ್ಯೆಯ ಚಟುವಟಿಕೆಯನ್ನು ನಿಲ್ಲಿಸಲು ತುರ್ತಾಗಿ ಕಾರ್ಯನಿರ್ವಹಿಸಬೇಕಾದೆ. ಇಲ್ಲದಿದ್ದರೆ ರಷ್ಯಾದ ಭಯೋತ್ಪಾದಕ ಚಟುವಟಿಕೆ ಇತರ ಯುರೋಪಿಯನ್ ರಾಷ್ಟ್ರಗಳು ಮತ್ತು ಏಷ್ಯಾಕ್ಕೆ ಹರಡುತ್ತದೆ. ಇದರಿಂದ ಬಾಲ್ಟಿಕ್ ರಾಜ್ಯಗಳು, ಪೋಲೆಂಡ್, ಮೊಲ್ಡೊವಾ ಮತ್ತು ಕಝಾಕಿಸ್ತಾನ್ ಅನ್ನು ಪ್ರತ್ಯೇಕಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

193 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಹಾಕುವಂತೆ ಝೆಲೆನ್ಸ್ಕಿ ಒತ್ತಾಯಿಸಿದ್ದಾರೆ. ಯುಎನ್ ಚಾರ್ಟರ್ನ ಆರ್ಟಿಕಲ್ 6 ಅನ್ನು ಉಲ್ಲೇಖಿಸಿ, ಪ್ರಸ್ತುತ ಚಾರ್ಟರ್‌ನಲ್ಲಿರುವ ಭದ್ರತಾ ಮಂಡಳಿಯ ಶಿಫಾರಸಿನ ಮೇರೆಗೆ ಜನರಲ್ ಅಸೆಂಬ್ಲಿಯಿಂದ ಸಂಘಟನೆಯಿಂದ ಹೊರಹಾಕಬಹುದು ಎಂದಿದ್ದಾರೆ.

ರಷ್ಯಾದ ಉಚ್ಚಾಟನೆಯು ವಾಸ್ತವಿಕವಾಗಿ ಅಸಾಧ್ಯವಾಗಿದೆ. ಖಾಯಂ ಕೌನ್ಸಿಲ್ ಸದಸ್ಯರಾಗಿ ರಷ್ಯಾ ತನ್ನ ವೀಟೋವನ್ನು ಬಳಸಿ ಅದನ್ನು ಹೊರಹಾಕುವ ಯಾವುದೇ ಪ್ರಯತ್ನವನ್ನು ತಡೆಯಲು ಸಾಧ್ಯವಾಗುತ್ತದೆ.

ಕೇಂದ್ರ ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಸೋಮವಾರ ಕಿಕ್ಕಿರಿದ ಶಾಪಿಂಗ್ ಮಾಲ್‌ ಮೇಲೆ ನಡೆದ ವೈಮಾನಿಕ ದಾಳಿ ಸೇರಿದಂತೆ, ರಷ್ಯಾದ ಇತ್ತೀಚಿನ ದಾಳಿಯ ಬಗ್ಗೆ ಚರ್ಚಿಸಲು ಉಕ್ರೇನ್ ಕೌನ್ಸಿಲ್ ಸಭೆಯನ್ನು ಕರೆದಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...