Sunday, May 24, 2026
Sunday, May 24, 2026

ವಿಶ್ವಾಸಮತಕ್ಕೆ ಮುನ್ನವೇ ರಾಜಿನಾಮೆ:ಶಿವಸೇನೆ ಬಗ್ಗೆ ಕಾಳಜಿ ಇದೆ-ಉದ್ಧವ್

Date:

ವಿಶ್ವಾಸ ಮತ ಯಾಚನೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ಉದ್ಧವ್ ಠಾಕ್ರೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ
ಮಹಾರಾಷ್ಟ್ರ ಸರ್ಕಾರ ಇಂದು ಗುರುವಾರ ವಿಶ್ವಾಸ ಮತ ಯಾಚನೆ ಮಾಡಬೇಕಿತ್ತು.

ವಿಶ್ವಾಸ ಮತ ಯಾಚನೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ಉದ್ಧವ್ ಠಾಕ್ರೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರು ಬಹುಮತ ಸಾಬೀತು ಪಡಿಸುವ ಆದೇಶ ನೀಡುವಲ್ಲಿ ಆತುರ ತೋರಿಸಿದ್ದಾರೆ ಎಂದು ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ರಾತ್ರಿ 9 ಗಂಟೆೆಗೆ ತೀರ್ಪು ಪ್ರಕಟಿಸಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವಂತೆ ರಾಜ್ಯಪಾಲರ ಹೊರಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ ಠಾಕ್ರೆ ಸರ್ಕಾರಕ್ಕೆ ಹೇಳಿತ್ತು.ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಾಬಾದ್ ಹೆಸರು ಸಂಭಾಜಿನಗರ, ಉಸ್ಮಾನಾಬಾದ್ ಹೆಸರು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ. ಅದೇ ವೇಳೆ ನವಿ ಮುಂಬೈ ಹೆಸರನ್ನು ಡಿಬಿ ಪಾಟೀಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಿಸಲಾಗುತ್ತದೆ. ವಿಶ್ವಾಸ ಮತವನ್ನು ಎದುರಿಸುತ್ತಿರುವ ಶಿವಸೇನೆಯ 31 ತಿಂಗಳ ಅವಧಿಯ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದ ಕೊನೆಯ ಪ್ರಮುಖ ನಿರ್ಧಾರ ಇದಾಗಿದೆ.

ನಾನು ಹೆದರುವವನಲ್ಲ. ಶಿವಸೈನಿಕರ ರಕ್ತ ಬೀದಿಯಲ್ಲಿ ಬೀಳುವುದಕ್ಕಿಂತ ನಾನು ಕೆಳಗಿಳಿಯುವುದೇ ಲೇಸು. ನಾನು ಹುದ್ದೆ ಬಗ್ಗೆ ಚಿಂತಿಸುವುದಿಲ್ಲ. ನನ್ನ ಶಿವಸೈನಿಕರ ಬೆಂಬಲದ ಬಗ್ಗೆ ಕಾಳಜಿ ವಹಿಸುತ್ತೇನೆ. ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ.

ಪ್ರಜಾಪ್ರಭುತ್ವವನ್ನು ಅನುಸರಿಸಬೇಕು ಎಂದು ಉದ್ಧವ್ ಠಾಕ್ರೆ ವಿಡಿಯೊ ಸಂವಾದದಲ್ಲಿ ಹೇಳಿದ್ದು ಬಳಿಕ ರಾಜೀನಾಮೆ ಪತ್ರ ನೀಡಲು ರಾಜ್ಯಪಾಲರ ನಿವಾಸಕ್ಕೆ ತೆರಳಿದರು.

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಠಾಕ್ರೆ ಅವರ ತಂಡವು ಕೇವಲ 15 ಶಾಸಕರನ್ನು ಹೊಂದಿದೆ. ಇತ್ತ ಏಕನಾಥ್ ಶಿಂಧೆ ಅವರು ಶಿವಸೇನಾ, ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದು 55 ಶಾಸಕರ ಪೈಕಿ 40 ಶಿವಸೇನಾ ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...