Wednesday, October 2, 2024
Wednesday, October 2, 2024

ಶಿಂಧೆ ಬಣಕ್ಕೆ ಬಿಜೆಪಿ ಜೊತೆ ಸರ್ಕಾರ ರಚನೆಗೆ ಆಸಕ್ತಿ

Date:

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ವಿಚಾರ ನಾವು ಸಂಭ್ರಮಿಸುವ ಬೆಳವಣಿಗೆ ಅಲ್ಲ ಎಂದು ಭಿನ್ನಮತೀಯ ಮುಖಂಡ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ನಾವು ಸೂಚಿಸಿದ ಸಮಸ್ಯೆಗಳನ್ನು ಉದ್ಧವ್ ಠಾಕ್ರೆ ಪರಿಗಣಿಸಿಲ್ಲ ಎಂದು ಬಂಡಾಯ ಬಣದ ವಕ್ತಾರ ದೀಪಕ್ ಕೇಸರ್‍ಕರ್ ಸ್ಪಷ್ಟಪಡಿಸಿದರು.

ಪಕ್ಷದೊಳಗಿನ ಆಂತರಿಕ ಸಂಘರ್ಷ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯ ಪರಿಣಾಮ ಎಂದು ಅವರು ಹೇಳಿದರು.
ಸಂಜಯ್ ರಾವುತ್ ಅವರಿಗೆ ಪಕ್ಷದಲ್ಲಿ ಹೆಚ್ಚುತ್ತಿರುವ ಪ್ರಾಧಾನ್ಯತೆ ಅಂಶವನ್ನೂ ಬಣ ಒತ್ತಿ ಹೇಳಿದೆ.

ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಹೋರಾಡುವ ವೇಳೆ ನಮ್ಮ ನಾಯಕರ ವಿರುದ್ಧ ಮುನಿಸಿಕೊಂಡಿದ್ದಕ್ಕೆ ಬೇಸರವಿದೆ ಎಂದರು.

ಸೈದ್ಧಾಂತಿಕವಾಗಿ ಭಿನ್ನವಾಗಿರುವ ಎನ್‍ಸಿಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಅಸಹಜ ಎಂದು ಕರೆದ ಅವರು, ಬಿಜೆಪಿ ಜತೆ ಕೈಜೋಡಿಸುವ ಒಲವು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಠಾಕ್ರೆ ಬಣದಲ್ಲಿ ಕೇವಲ 15 ಶಾಸಕರು ಉಳಿದುಕೊಂಡ ಹಿನ್ನೆಲೆಯಲ್ಲಿ ಸದನದಲ್ಲಿ ಬಲಾಬಲ ಪರೀಕ್ಷೆಗೆ ಸುಪ್ರೀಂಕೋರ್ಟ್ ಸೂಚಿಸಿದ ಬಳಿಕ ಠಾಕ್ರೆ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ಹಾಗೂ ಎನ್‍ಸಿಪಿ ಬಗ್ಗೆ ಹಲವು ಸಂಸದರಿಗೂ ಅಸಮಾಧಾನ ಇದೆ ಎಂದು ಕೇಸರ್‍ಕರ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...