Thursday, March 26, 2026
Thursday, March 26, 2026

ಶಿಂಧೆ ಬಣಕ್ಕೆ ಬಿಜೆಪಿ ಜೊತೆ ಸರ್ಕಾರ ರಚನೆಗೆ ಆಸಕ್ತಿ

Date:

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ವಿಚಾರ ನಾವು ಸಂಭ್ರಮಿಸುವ ಬೆಳವಣಿಗೆ ಅಲ್ಲ ಎಂದು ಭಿನ್ನಮತೀಯ ಮುಖಂಡ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ನಾವು ಸೂಚಿಸಿದ ಸಮಸ್ಯೆಗಳನ್ನು ಉದ್ಧವ್ ಠಾಕ್ರೆ ಪರಿಗಣಿಸಿಲ್ಲ ಎಂದು ಬಂಡಾಯ ಬಣದ ವಕ್ತಾರ ದೀಪಕ್ ಕೇಸರ್‍ಕರ್ ಸ್ಪಷ್ಟಪಡಿಸಿದರು.

ಪಕ್ಷದೊಳಗಿನ ಆಂತರಿಕ ಸಂಘರ್ಷ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯ ಪರಿಣಾಮ ಎಂದು ಅವರು ಹೇಳಿದರು.
ಸಂಜಯ್ ರಾವುತ್ ಅವರಿಗೆ ಪಕ್ಷದಲ್ಲಿ ಹೆಚ್ಚುತ್ತಿರುವ ಪ್ರಾಧಾನ್ಯತೆ ಅಂಶವನ್ನೂ ಬಣ ಒತ್ತಿ ಹೇಳಿದೆ.

ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಹೋರಾಡುವ ವೇಳೆ ನಮ್ಮ ನಾಯಕರ ವಿರುದ್ಧ ಮುನಿಸಿಕೊಂಡಿದ್ದಕ್ಕೆ ಬೇಸರವಿದೆ ಎಂದರು.

ಸೈದ್ಧಾಂತಿಕವಾಗಿ ಭಿನ್ನವಾಗಿರುವ ಎನ್‍ಸಿಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಅಸಹಜ ಎಂದು ಕರೆದ ಅವರು, ಬಿಜೆಪಿ ಜತೆ ಕೈಜೋಡಿಸುವ ಒಲವು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಠಾಕ್ರೆ ಬಣದಲ್ಲಿ ಕೇವಲ 15 ಶಾಸಕರು ಉಳಿದುಕೊಂಡ ಹಿನ್ನೆಲೆಯಲ್ಲಿ ಸದನದಲ್ಲಿ ಬಲಾಬಲ ಪರೀಕ್ಷೆಗೆ ಸುಪ್ರೀಂಕೋರ್ಟ್ ಸೂಚಿಸಿದ ಬಳಿಕ ಠಾಕ್ರೆ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ಹಾಗೂ ಎನ್‍ಸಿಪಿ ಬಗ್ಗೆ ಹಲವು ಸಂಸದರಿಗೂ ಅಸಮಾಧಾನ ಇದೆ ಎಂದು ಕೇಸರ್‍ಕರ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...