Thursday, March 26, 2026
Thursday, March 26, 2026

ವೃಕ್ಷಮಾತೆಗೆ ಈಗ ರಾಜ್ಯದ ಪರಿಸರ ರಾಯಭಾರಿ ಸ್ಥಾನಮಾನ ಪ್ರದಾನ

Date:

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ ನಿರ್ಮಾಣ ಮಾಡಿ ಸಾಲು ಮರದ ತಿಮ್ಮಕ್ಕ ಅವರಿಗೆ ಕೊಡುಗೆ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮಾತ್ರವಲ್ಲದೇ, ರಾಜ್ಯದ ಎಲ್ಲೇ ಆಗಲಿ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇವತ್ತು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಜನ್ಮದಿನಾಚರಣೆಗೆ ನಿಜಕ್ಕೂ ಅರ್ಥಪೂರ್ಣವಿದೆ. ನಾವೆಲ್ಲ ಹುಟ್ಟಿದಾಗ ಬಹಳ ಮುಗ್ಧತೆಯಿಂದ ಇರುತ್ತಿದ್ದೆವು. ದೊಡ್ಡವರಾದ ಮೇಲೂ ಮುಗ್ಧತೆ ಉಳಿಸಿಕೊಳ್ಳುವುದು ಕಷ್ಟ. ಆದರೆ ಸಾಲುಮರದ ತಿಮ್ಮಕ್ಕ ಅಜ್ಜಿಯ ಮೊಗದಲ್ಲಿ ಮಗುವಿನ ಮುಗ್ಧತೆ ಇದೆ ಎಂದು ಸಿಎಂ ಹೇಳಿದರು.

ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಅನುದಾನ ಹಾಗೂ ಅವರ ‌ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ‌ ಅನುದಾನ ನೀಡುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...