Wednesday, October 2, 2024
Wednesday, October 2, 2024

ವೃಕ್ಷಮಾತೆಗೆ ಈಗ ರಾಜ್ಯದ ಪರಿಸರ ರಾಯಭಾರಿ ಸ್ಥಾನಮಾನ ಪ್ರದಾನ

Date:

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ ನಿರ್ಮಾಣ ಮಾಡಿ ಸಾಲು ಮರದ ತಿಮ್ಮಕ್ಕ ಅವರಿಗೆ ಕೊಡುಗೆ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮಾತ್ರವಲ್ಲದೇ, ರಾಜ್ಯದ ಎಲ್ಲೇ ಆಗಲಿ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇವತ್ತು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಜನ್ಮದಿನಾಚರಣೆಗೆ ನಿಜಕ್ಕೂ ಅರ್ಥಪೂರ್ಣವಿದೆ. ನಾವೆಲ್ಲ ಹುಟ್ಟಿದಾಗ ಬಹಳ ಮುಗ್ಧತೆಯಿಂದ ಇರುತ್ತಿದ್ದೆವು. ದೊಡ್ಡವರಾದ ಮೇಲೂ ಮುಗ್ಧತೆ ಉಳಿಸಿಕೊಳ್ಳುವುದು ಕಷ್ಟ. ಆದರೆ ಸಾಲುಮರದ ತಿಮ್ಮಕ್ಕ ಅಜ್ಜಿಯ ಮೊಗದಲ್ಲಿ ಮಗುವಿನ ಮುಗ್ಧತೆ ಇದೆ ಎಂದು ಸಿಎಂ ಹೇಳಿದರು.

ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಅನುದಾನ ಹಾಗೂ ಅವರ ‌ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ‌ ಅನುದಾನ ನೀಡುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...