Friday, February 6, 2026
Friday, February 6, 2026

ಕೊಲೆಯ ಕೃತ್ಯ ಒಪ್ಪಿಕೊಂಡ ಪಾತಕಿಗಳ ಶಿಕ್ಷೆಗೆ ಉಗ್ರ ಕಾಯಿದೆ ತರಬೇಕು

Date:

ರಾಜಸ್ತಾನದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ತಾವೇ ಕೊಂದಿರುವುದಾಗಿ ಆ ಇಬ್ಬರು ಮುಸ್ಲಿಮರು ಹೇಳಿದ್ದಾರೆ. ಅವರು ಒಪ್ಪಿಕೊಂಡ ನಂತರವೂ ತನಿಖೆಯ ಅಗತ್ಯವೇನಿದೆ. ಕೂಡಲೇ ಅವರನ್ನು ಗುಂಡಿಟ್ಟು ಕೊಲ್ಲಬೇಕು ಇಲ್ಲವೇ ನೇಣಿಗೆ ಹಾಕಬೇಕು‘ ಎಂದು ಶಾಸಕ ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು
ರಾಜಸ್ತಾನದಲ್ಲಿ ನಡೆದಿರುವ ಕೊಲೆಗಡುಕ ಕೃತ್ಯ ಹಿಂದೂ ಸಮಾಜಕ್ಕೆ ಹಾಕಿರುವ ಸವಾಲು. ಇದು ಹಿಂದೂಗಳಿಗೆ ಮಾಡಿರುವ ಅಪಮಾನ ಎಂದು ಹೇಳಿದ ಈಶ್ವರಪ್ಪ, ಅಯೋಧ್ಯೆಯ ರೀತಿ ಕಾಶಿ, ಮಥುರಾದಲ್ಲಿ ಮುಸ್ಲಿಮರ ವಶದಲ್ಲಿರುವ ಹಿಂದೂಗಳ ಶ್ರದ್ಧಾ ಕೇಂದ್ರಗಳನ್ನು ವಾಪಸ್ ಪಡೆಯಬೇಕು. ಕಾಶಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ಅದು ಮುಗಿದ ನಂತರ ಅಲ್ಲಿನ ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಸುಪರ್ದಿಗೆ ಬರಲಿವೆ ಎಂದರು.

ಆರೋಪಿಗಳು ತಮ್ಮ ಕೃತ್ಯ ಬಹಿರಂಗವಾಗಿ ಒಪ್ಪಿಕೊಂಡ ನಂತರ ಅವರಿಗೆ ಉಗ್ರ ಶಿಕ್ಷೆ ವಿಧಿಸಲು ಅವಕಾಶವಾಗುವಂತೆ ಕಾನೂನಿಗೆ ತಿದ್ದುಪಡಿ ತನ್ನಿ. ಆ ನಿಟ್ಟಿನಲ್ಲಿ ತುರ್ತಾಗಿ ಸಂಸತ್ ಅಧಿವೇಶನ ಕರೆಯಿರಿ‘ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸುವುದಾಗಿ ತಿಳಿಸಿದರು.

ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿಯಿಂದಾಗಿಯೇ ಹಿಂದೂ ಸಮಾಜಕ್ಕೆ ಈ ದುಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ, ‘ಕೊಲೆಗಡುಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸದೇ ಎಐಸಿಸಿ ನಾಯಕ ರಾಹುಲ್‌ಗಾಂಧಿ ಬರೀ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ರಾಜಸ್ತಾನದ ಕಾಂಗ್ರೆಸ್ ಸರ್ಕಾರಕ್ಕೆ ಹೇಳಿದ್ದಾರೆ. ಇದು ನಾಚಿಕೆಗೇಡು. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈ ಕೃತ್ಯವನ್ನು ಕಠಿಣ ಶಬ್ಧಗಳಲ್ಲಿ ಖಂಡಿಸಿಲ್ಲ‘ ಎಂದು ಟೀಕಿಸಿದರು.

ಟೈಲರ್ ಕೊಲೆ ಮಾಡಿರುವ ಆರೋಪಿಗಳು ನಂತರ ದೇಶದ ಪ್ರಧಾನಿಗೂ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹಿಂದೂ ಸಮಾಜದ ತಾಳ್ಮೆ ಪರೀಕ್ಷಿಸುವುದು ಬೇಡ. ಸಮಾಜ ದಂಗೆ ಏಳುವ ಮುನ್ನ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ. ಇಂತಹ ಭಯೋತ್ಪಾದನಾ ಕೃತ್ಯಗಳನ್ನು ಮಟ್ಟ ಹಾಕಲು ಸಂಘಟಿತ ಹೋರಾಟಕ್ಕೆ ವಿಶ್ವಸಂಸ್ಥೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...