Tuesday, August 25, 2026
Tuesday, August 25, 2026

ಕೋವಿಡ್ ಕಾರಣ ನಿಂತ ಎಲ್ಲಾ ರೈಲುಸೇವೆ ಆರಂಭಿಸಲು ಮನವಿ

Date:

ಕೊರೊನಾ ಪೂರ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಲ್ಲಾ ರೈಲು ಸೇವೆಗಳನ್ನು ಪುನರ್‌ ಆರಂಭಿಸುವಂತೆ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರು ಸಲಹೆ ನೀಡಿದರು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಯಾಣಿಕರ ಸೇವೆಗಳ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು.

ಮೈಸೂರು-ಬೆಂಗಳೂರು ಮಧ್ಯೆ ಓಡಾಡುವ ಎಲ್ಲಾ ಸೂಪರ್‌ ಫಾಸ್ಟ್‌ ರೈಲುಗಳನ್ನು ಮತ್ತಷ್ಟು ವೇಗಗೊಳಿಸುವುದು. ಮೈಸೂರು ಮತ್ತು ಬೆಂಗಳೂರು ನಡುವೆ ಓಡುವ ಮಾಲ್ಗುಡಿ ಎಕ್ಸ್‌ಪ್ರೆಸ್‌ ನಲ್ಲಿ ಹವಾ ನಿಯಂತ್ರಿತ ಬೋಗಿ ಹೆಚ್ಚಿಸುವುದು. ಮೈಸೂರಿನಿಂದ ಹಾಸನ ಮತ್ತು ಮಂಗಳೂರು ಮೂಲಕ ಕರ್ನಾಟಕದ ಕರಾವಳಿ ಪ್ರದೇಶದೊಂದಿಗೆ ಸಂಪರ್ಕಿಸುವ ಹೊಸ ರೈಲು ಸೇವೆಗಳು, ತಾಳಗುಪ್ಪ, ಶಿವಮೊಗ್ಗ ಟೌನ್‌ನಿಂದ ಚೆನ್ನೈ ಮತ್ತು ಮೈಸೂರು ಕಡೆಗೆ
ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ, ಹರಿಹರ ಮತ್ತು ಹಾವೇರಿ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯ ಹೆಚ್ಚಿಸುವುದು, ಮೈಸೂರಿನಿಂದ ದಾದರ್‌, ಅಜ್ಮಿರ್‌ ಮತ್ತು ನಿಜಾಮುದ್ದಿನ್‌ ನಿಲ್ದಾಣಗಳಿಗೆ ಈಗ ಇರುವ ಸಾಪ್ತಾಹಿಕ ಮತ್ತು ವಾರಕ್ಕೆ ಎರಡು ದಿನದ ಸೇವೆಯಿಂದ ವಾರಕ್ಕೆ ನಾಲ್ಕು ದಿನಗಳಿಗೆ ವಿಸ್ತರಿಸಲು ಸದಸ್ಯರು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...