Wednesday, May 21, 2025
Wednesday, May 21, 2025

ಕೋವಿಡ್ ಕಾರಣ ನಿಂತ ಎಲ್ಲಾ ರೈಲುಸೇವೆ ಆರಂಭಿಸಲು ಮನವಿ

Date:

ಕೊರೊನಾ ಪೂರ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಲ್ಲಾ ರೈಲು ಸೇವೆಗಳನ್ನು ಪುನರ್‌ ಆರಂಭಿಸುವಂತೆ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರು ಸಲಹೆ ನೀಡಿದರು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಯಾಣಿಕರ ಸೇವೆಗಳ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು.

ಮೈಸೂರು-ಬೆಂಗಳೂರು ಮಧ್ಯೆ ಓಡಾಡುವ ಎಲ್ಲಾ ಸೂಪರ್‌ ಫಾಸ್ಟ್‌ ರೈಲುಗಳನ್ನು ಮತ್ತಷ್ಟು ವೇಗಗೊಳಿಸುವುದು. ಮೈಸೂರು ಮತ್ತು ಬೆಂಗಳೂರು ನಡುವೆ ಓಡುವ ಮಾಲ್ಗುಡಿ ಎಕ್ಸ್‌ಪ್ರೆಸ್‌ ನಲ್ಲಿ ಹವಾ ನಿಯಂತ್ರಿತ ಬೋಗಿ ಹೆಚ್ಚಿಸುವುದು. ಮೈಸೂರಿನಿಂದ ಹಾಸನ ಮತ್ತು ಮಂಗಳೂರು ಮೂಲಕ ಕರ್ನಾಟಕದ ಕರಾವಳಿ ಪ್ರದೇಶದೊಂದಿಗೆ ಸಂಪರ್ಕಿಸುವ ಹೊಸ ರೈಲು ಸೇವೆಗಳು, ತಾಳಗುಪ್ಪ, ಶಿವಮೊಗ್ಗ ಟೌನ್‌ನಿಂದ ಚೆನ್ನೈ ಮತ್ತು ಮೈಸೂರು ಕಡೆಗೆ
ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ, ಹರಿಹರ ಮತ್ತು ಹಾವೇರಿ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯ ಹೆಚ್ಚಿಸುವುದು, ಮೈಸೂರಿನಿಂದ ದಾದರ್‌, ಅಜ್ಮಿರ್‌ ಮತ್ತು ನಿಜಾಮುದ್ದಿನ್‌ ನಿಲ್ದಾಣಗಳಿಗೆ ಈಗ ಇರುವ ಸಾಪ್ತಾಹಿಕ ಮತ್ತು ವಾರಕ್ಕೆ ಎರಡು ದಿನದ ಸೇವೆಯಿಂದ ವಾರಕ್ಕೆ ನಾಲ್ಕು ದಿನಗಳಿಗೆ ವಿಸ್ತರಿಸಲು ಸದಸ್ಯರು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ

Santosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ...

Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ‌ ಮುಖ್ಯ- ಹೆಚ್.ವೈ.ಸತೀಶ್

Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ...

Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ

Guarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ...

Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ

Gruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ,...