Thursday, July 9, 2026
Thursday, July 9, 2026

ಬೆಂಗಳೂರಿನ ಸಮಗ್ರ ಅಭಿವೃದ್ದಿ ನಮ್ಮ ಸರ್ಕಾರದ ಗುರಿ- ಬೊಮ್ಮಾಯಿ

Date:

ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಗುಣಮಟ್ಟದ ನಗರವನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹೆಬ್ಬಾಳ ವಿಧಾನಸಭಾಕ್ಷೇತ್ರದ ಗಂಗಾನಗರದಲ್ಲಿ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಹಿಂದಿನವರು ಬೆಂಗಳೂರು ಅಭಿವೃದ್ಧಿ ಮಾಡದ ಕಾರಣ ಹಲವು ಸಮಸ್ಯೆಗಳು ಸೃಷ್ಟಿಯಾಗಿವೆ. ಕಾಲಕಾಲಕ್ಕೆ ರಸ್ತೆ ಅಭಿವೃದ್ಧಿ, ರಾಜಕಾಲುವೆ ಸಮಸ್ಯೆ ಸರಿಪಡಿಸಿದ್ದರೆ ಈ ಸಮಸ್ಯೆಗಳು ಉದ್ಭವವಾಗುತ್ತಿರಲಿಲ್ಲ. ಇವಾಗ ನಾನು ರಸ್ತೆ, ರಾಜಕಾಲುವೆ ಅಭಿವೃದ್ಧಿ ಸವಾಲನ್ನು ಸ್ವೀಕಾರ ಮಾಡಿದ್ದೇನೆ ಎಂದರು.

ರಾಜಕಾಲುವೆಗೆ 1600 ಕೋಟಿ ಕೊಟ್ಟಿದ್ದೇವೆ.
ಸಬ್ ಅರ್ಬನ್ ಗೆ ಪ್ರಧಾನಿಗಳು ಅಡಿಗಲ್ಲು ಹಾಕಿದ್ದಾರೆ. ಫೆರಿಫರಲ್ ರಿಂಗ್ ರಸ್ತೆಗೂ ಮುಂದೆ ಅಡಿಗಲ್ಲು ಹಾಕುತ್ತೇವೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಗೆ ಒತ್ತು ನೀಡಲಾಗುವುದು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ದೂರದೃಷ್ಟಿ ಮೂಲಕ ಮೂಲಭೂತ ಸೌಕರ್ಯ ಸಿಗಲು ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.

ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿ ಸಂಚಾರ ವ್ಯವಸ್ಥೆ ಯನ್ನು ಸುಗಮಗೊಳಿಸಲು ನಿರ್ದೇಶನ ನೀಡಿದ್ದೇನೆ. ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡು ಬೆಂಗಳೂರಿನ ಸಮಗ್ರ ಅಭಿವೃದ್ಧಿಯತ್ತ ನಡೆದಿದ್ದೇವೆ. ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಮೂಲಭೂತ ಸೌಕರ್ಯ ಬೆಂಗಳೂರಿನ ನಾಗರಿಕರಿಗೆ ದೊರೆಯಬೇಕು ಎಂಬ ದೂರದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.

ಪಿ.ಎಸ್.ಆರ್. ಬಿಲ್ಡರ್, ಗ್ರಾಸ್ ರೂಟ್, ಎ.ಬಿ.ಎಸ್.ಎಸ್. ಇವರ ಸಹಭಾಗಿತ್ವದಲ್ಲಿ ಗಂಗಾನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಿದರು.
ರಿಫೆರಲ್ ರಿಂಗ್ ರೋಡಿಗೆ ಟೆಂಡರ್ ಕರೆಯಲಾಗಿದೆ. ಈ ವರ್ಷ ಕಾಮಗಾರಿ ಪ್ರಾರಂಭವಾಗುತ್ತದೆ. ಮೆಟ್ರೋ ವಿಸ್ತರಣೆಯಾಗುತ್ತಿದೆ. ನಗರದ ಸೌಂದರ್ಯೀಕರಣಕ್ಕೆ ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಬಡವರು ಇರುವ ಸ್ಥಳಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನೇ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...