Saturday, June 21, 2025
Saturday, June 21, 2025

ಪೌರಕಾರ್ಮಿಕರ ವೇತನ ₹2000 ಹೆಚ್ಚಳ- ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್ ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,ಹೈದರಾಬಾದ್ ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು, ರಾಜ್ಯಗಳ ನಾಯಕರು ಭಾಗಿಯಾಗಲಿದ್ದಾರೆ.
ರಾಜ್ಯದ ವಿವಿಧ ನಗರ ಪಾಲಿಕೆಗಳಲ್ಲಿ ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾನೂನು ನಿಯಮಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸಲು ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು ಮತ್ತು ಪೌರಕಾರ್ಮಿಕರ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗುವುದು ಎಂದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದು ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಸಾಂದರ್ಭಿಕವಾಗಿ ಭೇಟಿ ಮಾಡಿ ರಾಜ್ಯದ ಕುರಿತು ಮಾತುಕತೆ ನಡೆಸಲು ಪ್ರಯತ್ನಿಸುತ್ತೇನೆ ಎಂದರು.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ನಡೆಸಿದ ಸಭೆ ಕುರಿತು ಮಾತನಾಡಿದ ಬೊಮ್ಮಾಯಿ, ಪ್ರಸ್ತಾವಿತ ಸಮಿತಿಯು ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ. ಪೌರಕಾರ್ಮಿಕರು ಸಾಮಾಜಿಕ ಘನತೆ ಮತ್ತು ಭದ್ರತೆಗೆ ಅರ್ಹರು. ರಾಜ್ಯ ಸರಕಾರ ಮಾನವೀಯ ಧೋರಣೆಯೊಂದಿಗೆ ಅವರ ಸಂಕಷ್ಟಗಳಿಗೆ ಸ್ಪಂದಿಸಲಿದೆ. ಅವರ ಮಾಸಿಕ ಸಂಭಾವನೆಯನ್ನು 2,000 ರೂಪಾಯಿ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರ ನೇಮಕಾತಿಯನ್ನು ಸರಳಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಎಂದು ಕೂಡ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Yoga Day ಯೋಗ ಬದುಕಿನ ಹಾದಿಯ ಕೈದೀವಿಗೆ : ರೊ. ಕೆ. ಬಿ. ರವಿಶಂಕರ್

World Yoga Day ವಿಶ್ವ ಯೋಗ ದಿನಾಚರಾಣೆಯನ್ನು ರೊಟರಿ...

Bharat Scouts and Guides ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನಾ ರ‍್ಯಾಲಿ

Bharat Scouts and Guides ಭಾರತ್ ಸ್ಕೌಟ್ ಮತ್ತು ಗೈಡ್ಸ್ ಶಿವಮೊಗ್ಗ...

International Yoga Day ಯೋಗ ದಿನಾಚರಣೆ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ : ಶ್ರೀ ರುದ್ರಾರಾಧ್ಯ ಸಿ ವಿ

International Yoga Day ಅಂತರಾಷ್ಟ್ರೀಯ ಯೋಗ ದಿನ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ...

MESCOM ಜೂ.24 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ...