Saturday, February 7, 2026
Saturday, February 7, 2026

ರಾಜ್ಯದಲ್ಲಿ ಬೇಡಿಕೆಗಿಂತ 15 ಪಟ್ಟು ರಸಗೊಬ್ಬರ ಉತ್ಪಾದನೆ- ಸಚಿವ ಖೂಬಾ

Date:

ರಾಜ್ಯದ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಾಸಾಯನಿಕ ಗೊಬ್ಬರವನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ, ರಾಜ್ಯ ಸರ್ಕಾರಕ್ಕೆ ಪೂರೈಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ಸರ್ಕಾರ, ಎಫ್ ಕೆಸಿ ಸಿಐ, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ, ಆಟೋ ಡೀಲರ್ಸ್ ಅಸೋಸಿಯೇಷನ್‌, ಸಹಯೋಗದೊಂದಿಗೆ 2022 ಆಯೋಜಿಸಿದ್ದ 3 ನೇ ಇಂಟರ್ನ್ಯಾಷನಲ್ ಗ್ರೀನ್ ವೆಹಿಕಲ್ ಎಕ್ಸ್‌ಪೋ ಆಯೋಜಿಸಿದ್ದ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ, ಘಟಕಗಳು, ಬ್ಯಾಟರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೈತರನ್ನು ಆತಂಕಕ್ಕೆ ದೂಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ ಖೂಬಾ ರಾಜ್ಯದಲ್ಲಿ ಬೇಡಿಕೆಗಿಂತ ಹದಿನೈದು ಪಟ್ಟು ಹೆಚ್ಚು ಗೊಬ್ಬರ ಉತ್ಪಾದನೆಯಾಗುತ್ತಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಯಾವುದೋ ಒಂದು ಗ್ರಾಮದಲ್ಲಿ ಗೊಬ್ಬರ ಪೂರೈಕೆ ಒಂದೆರಡು ಗಂಟೆ ತಡವಾಗಿದ್ದರೆ ವಿಪಕ್ಷಗಳು ಅದನ್ನೇ ದಾಳವಾಗಿ ಉಪಯೋಗಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...