Thursday, October 3, 2024
Thursday, October 3, 2024

ರಾಷ್ಟ್ರಾಧ್ಯಕ್ಷರನ್ನ ಅವಿರೋಧ ಆಯ್ಕೆ ಮಾಡುವುದು ಉತ್ತಮ- ಯಶ್ವಂತ್ ಸಿನ್ಹಾ

Date:

ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸುತ್ತಿರುವ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾ ಛತ್ತೀಸ್ಗಢಕ್ಕೆ ಭೇಟಿ ನೀಡಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆ ಅತ್ಯಂತ ಘನತೆಯುಳ್ಳದ್ದು. ಆ ಸ್ಥಾನಕ್ಕೆ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಈ ದೇಶಕ್ಕೆ ಮೂಕ ರಾಷ್ಟ್ರಪತಿಗಳು ಬೇಕಿಲ್ಲ. ಅಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಬಾರದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿ ಎಂದರು.

ರಾಷ್ಟ್ರಪತಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಸರ್ಕಾರ ಘನತೆ ಮೆರೆಯಬೇಕಿತ್ತು. ಆ ಸ್ಥಾನದಲ್ಲಿದ್ದವರಿಗೆ ಸಂವಿಧಾನದತ್ತವಾದ ಅಧಿಕಾರವಿದೆ. ಈ ಹಿಂದಿನ ಕೆಲ ಅಧ್ಯಕ್ಷರು ಕಚೇರಿಯನ್ನೇ ಬಿಟ್ಟು ಹೊರಬಾರದೇ ಇದ್ದುದನ್ನು ನಾವು ನೋಡಿದ್ದೇವೆ. ಮಾತನಾಡದ ಅಧ್ಯಕ್ಷರು ಈ ದೇಶಕ್ಕೆ ಬೇಡ. ನಿಯೋಜಿಯ ಜವಾಬ್ದಾರಿಯನ್ನು ಪೂರೈಸುವವರು ಅಧ್ಯಕ್ಷರಾಗಬೇಕು ಎಂದರು.

ರಾಷ್ಟ್ರಪತಿ ಚುನಾವಣೆಯ ಮತದಾನವು ಜುಲೈ 18 ರಂದು ನಡೆಯಲಿದೆ. 21ರಂದು ಮತ ಎಣಿಕೆ ಜರುಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...