Monday, August 3, 2026
Monday, August 3, 2026

ರಾಷ್ಟ್ರಾಧ್ಯಕ್ಷರನ್ನ ಅವಿರೋಧ ಆಯ್ಕೆ ಮಾಡುವುದು ಉತ್ತಮ- ಯಶ್ವಂತ್ ಸಿನ್ಹಾ

Date:

ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸುತ್ತಿರುವ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾ ಛತ್ತೀಸ್ಗಢಕ್ಕೆ ಭೇಟಿ ನೀಡಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆ ಅತ್ಯಂತ ಘನತೆಯುಳ್ಳದ್ದು. ಆ ಸ್ಥಾನಕ್ಕೆ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಈ ದೇಶಕ್ಕೆ ಮೂಕ ರಾಷ್ಟ್ರಪತಿಗಳು ಬೇಕಿಲ್ಲ. ಅಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಬಾರದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿ ಎಂದರು.

ರಾಷ್ಟ್ರಪತಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಸರ್ಕಾರ ಘನತೆ ಮೆರೆಯಬೇಕಿತ್ತು. ಆ ಸ್ಥಾನದಲ್ಲಿದ್ದವರಿಗೆ ಸಂವಿಧಾನದತ್ತವಾದ ಅಧಿಕಾರವಿದೆ. ಈ ಹಿಂದಿನ ಕೆಲ ಅಧ್ಯಕ್ಷರು ಕಚೇರಿಯನ್ನೇ ಬಿಟ್ಟು ಹೊರಬಾರದೇ ಇದ್ದುದನ್ನು ನಾವು ನೋಡಿದ್ದೇವೆ. ಮಾತನಾಡದ ಅಧ್ಯಕ್ಷರು ಈ ದೇಶಕ್ಕೆ ಬೇಡ. ನಿಯೋಜಿಯ ಜವಾಬ್ದಾರಿಯನ್ನು ಪೂರೈಸುವವರು ಅಧ್ಯಕ್ಷರಾಗಬೇಕು ಎಂದರು.

ರಾಷ್ಟ್ರಪತಿ ಚುನಾವಣೆಯ ಮತದಾನವು ಜುಲೈ 18 ರಂದು ನಡೆಯಲಿದೆ. 21ರಂದು ಮತ ಎಣಿಕೆ ಜರುಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...