Wednesday, April 22, 2026
Wednesday, April 22, 2026

ರಾಷ್ಟ್ರಾಧ್ಯಕ್ಷರನ್ನ ಅವಿರೋಧ ಆಯ್ಕೆ ಮಾಡುವುದು ಉತ್ತಮ- ಯಶ್ವಂತ್ ಸಿನ್ಹಾ

Date:

ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸುತ್ತಿರುವ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾ ಛತ್ತೀಸ್ಗಢಕ್ಕೆ ಭೇಟಿ ನೀಡಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆ ಅತ್ಯಂತ ಘನತೆಯುಳ್ಳದ್ದು. ಆ ಸ್ಥಾನಕ್ಕೆ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಈ ದೇಶಕ್ಕೆ ಮೂಕ ರಾಷ್ಟ್ರಪತಿಗಳು ಬೇಕಿಲ್ಲ. ಅಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಬಾರದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿ ಎಂದರು.

ರಾಷ್ಟ್ರಪತಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಸರ್ಕಾರ ಘನತೆ ಮೆರೆಯಬೇಕಿತ್ತು. ಆ ಸ್ಥಾನದಲ್ಲಿದ್ದವರಿಗೆ ಸಂವಿಧಾನದತ್ತವಾದ ಅಧಿಕಾರವಿದೆ. ಈ ಹಿಂದಿನ ಕೆಲ ಅಧ್ಯಕ್ಷರು ಕಚೇರಿಯನ್ನೇ ಬಿಟ್ಟು ಹೊರಬಾರದೇ ಇದ್ದುದನ್ನು ನಾವು ನೋಡಿದ್ದೇವೆ. ಮಾತನಾಡದ ಅಧ್ಯಕ್ಷರು ಈ ದೇಶಕ್ಕೆ ಬೇಡ. ನಿಯೋಜಿಯ ಜವಾಬ್ದಾರಿಯನ್ನು ಪೂರೈಸುವವರು ಅಧ್ಯಕ್ಷರಾಗಬೇಕು ಎಂದರು.

ರಾಷ್ಟ್ರಪತಿ ಚುನಾವಣೆಯ ಮತದಾನವು ಜುಲೈ 18 ರಂದು ನಡೆಯಲಿದೆ. 21ರಂದು ಮತ ಎಣಿಕೆ ಜರುಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...