Sunday, December 14, 2025
Sunday, December 14, 2025

ಇಲೆಕ್ಟ್ರಿಕ್ ವಾಹನ ಜನಸಾಮಾನ್ಯರು ಖರೀದಿಸುವಂತಿರಬೇಕು-ಬೊಮ್ಮಾಯಿ

Date:

ರಾಜ್ಯದಲ್ಲಿ ಹೈಡ್ರೋಜನ್ ಇಂಧನ ಉತ್ಪಾದಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ನಗರದಲ್ಲಿ ನಿನ್ನೆ ಶುಕ್ರವಾರ ಆಯೋಜಿಸಲಾಗಿದ್ದ ಇ.ವಿ ಅಭಿಯಾನ ಮತ್ತು 152 ಚಾರ್ಜಿಂಗ್ ಸ್ಟೇಷನ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಹೈಡ್ರೋಜನ್ ಇಂಧನ ತಯಾರಿ
ಸಲು ಈಗಾಗಲೇ 2 ಕಂಪನಿ ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರ 3 ಘಟಕ ಗಳು ಕರ್ನಾ ಟಕದಲ್ಲಿ ಆರಂಭವಾಗಲಿವೆ. ಹೈಡ್ರೋಜನ್ ಇಂಧನ ನವೀಕರಿ ಸಬಹುದಾದ ಇಂಧನಗಳಲ್ಲೇ ಅತ್ಯು ತ್ತಮವಾಗಿದೆ. ಇದರಿಂದ, ಇಂಧನ ಉಳಿತಾಯವಾಗಲಿದೆ. ಕೇಂದ್ರ ಸರ್ಕಾ ರದ ನೆರವಿನಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಮುದ್ರದ ನೀರಿನಿಂದ ಅಮೋ ನಿಯಾ ತಯಾರಿಸಲು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸ
ಲಾಗಿದೆ. ಡಿಎಪಿ ಗೊಬ್ಬರ ತಯಾರಿಸಲು ಅಮೋನಿಯಾವನ್ನು ಅತಿ ಹೆಚ್ಚು ಬಳಸಲಾಗುತ್ತಿದೆ. ಅಮೋನಿಯಾ ಉತ್ಪಾದಿಸಲು ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಭಾರತ ಹಾಗೂ ಕೊಲ್ಲಿ ದೇಶಗಳು ಹೊರತುಪಡಿಸಿದರೆ ಬೇರೆಲ್ಲಿಯೂ ಈ ರೀತಿ ತಂತ್ರಜ್ಞಾನ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್‌ ವಾಹನ ಖರೀದಿ ದರ ಜನಸಾಮಾನ್ಯರಿಗೆ ನಿಲುಕುವಂತಿರ ಬೇಕು. ಉತ್ಪಾದಕರು ಈ ನಿಟ್ಟಿನಲ್ಲಿ ಚಿಂತಿಸಬೇಕು. ಎಲೆಕ್ಟ್ರಿಕಲ್‌ ವಾಹನಗಳಿಗಾಗಿ ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‌ಗಳು ಹಾಗೂ ಬ್ಯಾಟರಿಗಳನ್ನು ಬದಲಾಯಿಸುವ ವ್ಯವಸ್ಥೆಯ ಕೇಂದ್ರ ಸ್ಥಾಪಿಸಲು ಮಹತ್ವ ನೀಡುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಎಲೆಕ್ಟ್ರಿಕಲ್‌ ವಾಹನ ಬಳಕೆ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಮಲ್ಟಿ ಎಕ್ಸಲ್‌ ಎಲೆಕ್ಟ್ರಿಕಲ್‌ ಟ್ರಕ್‌ ಸಹ ಮಾರುಕಟ್ಟೆಗೆ ಬಿಡುಗಡೆಯಾಗಲಿವೆ. ಆಗ ಸಾರಿಗೆ ಕ್ಷೇತ್ರದಲ್ಲಿ ಬದಲಾವಣೆಗಳಾಗಬಹುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...