Wednesday, April 22, 2026
Wednesday, April 22, 2026

ಪತ್ರಕರ್ತರು ಮುಚ್ಚಿಟ್ಟದ್ದನ್ನು ಜನರೀಗ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುತ್ತಿದ್ದಾರೆ

Date:

ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಮೂಲಕ ವಿಮರ್ಶಾತ್ಮಕವಾಗಿರಬೇಕಿದ್ದ ಮಾಧ್ಯಮ ಇಂದು ಮದಿಸಿದ ಆನೆಯಂತಾಗಿದೆ. ವಿಷವನ್ನು ಕಕ್ಕುವ ಮಾಧ್ಯಮಗಳಿಂದ ಸಮಾಜದಲ್ಲಿ ಮಾನವ ಸಂಬಂಧಗಳು ಹದಗೆಡುತ್ತಿವೆ ಎಂದು ವಿಚಾರವಾದಿ, ಸಾಹಿತಿ ಡಾ.ರಹಮತ್ ತರೀಕೆರೆ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ.

ಚಿತ್ತಾಪುರ ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕು ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ನೈತಿಕತೆ ಉಳಿಸಿಕೊಂಡ ಪೆನ್ನಿಗೆ ಮಾತ್ರ ಪ್ರಭುತ್ವ ಹೆದರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುತ್ತ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಾದ ಶಿಕ್ಷಕರು, ವೈದ್ಯರು, ವಕೀಲರು ಹಾಗೂ ಪತ್ರಕರ್ತರು ಕೆಡಬಾರದು. ಒಂದು ಸಂದರ್ಭದಲ್ಲಿ ಈ 4ಜನ ಕೆಟ್ಟುಹೋದರೆ ಸಮಾಜ ಪತನವಾಗುತ್ತದೆ. ವ್ಯವಸ್ಥೆಯನ್ನು ತಿದ್ದಬೇಕಾದ ಮಾಧ್ಯಮವೇ ಸಮಾಜಕ್ಕೆ ವಿಷ ಉಣಬಡಿಸುತ್ತದೆಂದರೆ ಪತನ ಶುರುವಾಗಿದೆ ಎಂತಲೇ ಅರ್ಥ. ನಾವೆಲ್ಲರೂ ಆತ್ಮವಿಮರ್ಶೆಗೊಳಪಡದ ಹೊರೆತು ಪರಿವರ್ತನೆ ಅಸಾಧ್ಯ ಎಂದು ಹೇಳಿದ್ದಾರೆ.

ಪ್ರಸ್ತುತ, ರಾಜಕೀಯ ವ್ಯವಸ್ಥೆಯಲ್ಲಿ ಬಹುತೇಕರು ಬೈಗುಳವನ್ನೇ ಅಶ್ಲೀಲ ಎಂದು ತಿಳಿದಿದ್ದಾರೆ. ಬೈಗುಳ ಅಶ್ಲೀಲವಲ್ಲ.ಸುಳ್ಳು ಹೇಳುವುದು ಅಶ್ಲೀಲವಾಗುತ್ತದೆ. ಪ್ರಸಾರ ಸಂಖ್ಯೆ ಹೆಚ್ಚಿಸಿಕೊಳ್ಳುವಲ್ಲಿ ಪೈಪೋಟಿಗಿಳಿದಿರುವ ಪತ್ರಿಕೆಗಳು, ಸುಳ್ಳನ್ನೇ ಬಣ್ಣ ಲೇಪಿಸಿ ಪ್ರಕಟಿಸುವ ಮೂಲಕ ಸತ್ಯದಿಂದ ಕೂಡಿದ ಸುದ್ದಿ ಓದುವ ಅಭಿರುಚಿಯನ್ನೇ ಕೆಡಿಸಿವೆ. ಕೋಮು ದ್ವೇಷದ ಸುದ್ದಿ ಪ್ರಚಾರದಿಂದ ಮನುಷ್ಯ ಸಂಬಂದ ಹದಗೆಟ್ಟಿದೆ. ಸಂಶೋದಕ ಎಂ.ಎಂ.ಕಲಬುರಗಿ ಹಾಗೂ ಗೌರಿ ಲಂಕೇಶರ ಹತ್ಯೆಯನ್ನು ದಾರುಣ ಕೊಲೆ ಎಂದು ಬಿತ್ತರಿಸಿದ್ದು ಮಾಧ್ಯಮಗಳ ದುರಂತ ಎಂದು ಬೇಸರ ವ್ಯಕ್ತಪಡಿಸಿದ ತರೀಕೆರೆ, ಸಾಮಾಜಿಕ ಜಾಲತಾಣಗಳು ಬಂದ ಮೇಲೆ ಪತ್ರಕರ್ತರು ಮುಚ್ಚಿಟ್ಟ ಸುದ್ದಿಯನ್ನು ಜನರೇ ಬಿತ್ತರಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಕ್ರೀಯ ವಿರೋಧ ಪಕ್ಷ ಮತ್ತು ಸ್ವತಂತ್ರ ಮಾಧ್ಯಮದಿಂದ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿದೆ. ಆಡಳಿತ ವ್ಯವಸ್ಥೆಗೆ ಪತ್ರಕರ್ತರು ಸವಾಲು ಹಾಕದಿದ್ದರೆ ಸರ್ವಾಧಿಕಾರ ಸ್ಥಾಪನೆಯಾಗುತ್ತದೆ.

ಪ್ರಶ್ನೆ ಕೇಳುವ ನೈತಿಕತೆ ಮತ್ತು ಸಂವಿಧಾನಿಕ ಹಕ್ಕು ಪತ್ರಕರ್ತರು ಉಳಿಸಿಕೊಳ್ಳಬೇಕು. ಜನಪ್ರತಿನಿಧಿಗಳನ್ನು ಇಂದ್ರ,ಚಂದ್ರ ಎಂದು ಹೊಗಳುವ ಮೂಲಕ ವ್ಯಕ್ತಿಯಾರಾಧನೆ ಮಾಡಿದರೆ ಸೊಕ್ಕು ಅಹಾಂಕರ ಬೆಳೆಯುತ್ತದೆ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ನನ್ನ ಕರ್ತವ್ಯವಾಗಿರುತ್ತದೆ. ಜೊತೆಗೆ ಕ್ಷೇತ್ರದ ಜನರನ್ನು ವೈಚಾರಿಕವಾಗಿ ಸಾಂಸ್ಕೃತಿಕವಾಗಿ ಮೇಲೆತ್ತುವುದೂ ಕೂಡ ನನ್ನದೇ ಜವಾಬ್ದಾರಿಯಾಗಿದೆ. ಪ್ರಬುದ್ಧ ಸಮಾಜ ಸಮೃದ್ಧ ಸಮಾಜ ನಿರ್ಮಾಣ ಪ್ರತಿಯೊಬ್ಬರ ಗುರಿಯಾಗಬೇಕು. ಪ್ರಜಾಪ್ರಭುತ್ವದ ಕೊನೆಯ ಆಶಯವೇ ಪತ್ರಿಕಾರಂಗ. ಮಾಧ್ಯಮ ದಾರಿ ತಪ್ಪಿದರೆ ಕಟ್ಟಕಡೆಯ ವ್ಯಕ್ತಿ ಸಾಯುತ್ತಾನೆ ಎಂದು ಪ್ರಿಯಾಂಕ್ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದ್ವಿದಳ ದಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವರಂಜನ್ ಸತ್ಯಂಪೇಟೆ, ಸಂಘದ ತಾಲೂಕು ಉಪಾಧ್ಯಕ್ಷ ಮಲ್ಲಿಕಾರ್ಜುನ ಮುಡುಬೂಳಕರ, ಶಿಕ್ಷಣ ಪ್ರೇಮಿ ನಾಗರೆಡ್ಡಿ ಪಾಟೀಲ ಕರದಾಳ ಮಾತನಾಡಿದರು. ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ಧರಾಜ ಮಲಕಂಡಿ ಅಧ್ಯಕ್ಷತೆ ವಹಿಸಿದ್ದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ನೃಪತುಂಗ ಪತ್ರಿಕೆಯ ಸಂಪಾದಕ ಶಿವರಾಯ ದೊಡ್ಡಮನಿ, ಕ್ಷೇತ್ರಶಿಕ್ಷಣಾಧಿಕಾರಿ, ಸಿದ್ಧವೀರಯ್ಯ ರುದ್ನೂರ, ತಾಪಂ ಇಒ ನೀಲಗಂಗಾ ಬಬಲಾದ, ಜಿಪಂ ಮಾಜಿ ಸದಸ್ಯ ಅರುಣಕುಮಾರ ಪಾಟೀಲ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ ಸಾಲಿಮಠ, ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ, ವಾಡಿ ಪುರಸಭೆ ಅಧ್ಯಕ್ಷೆ ಝರೀನಾಬೇಗಂ, ಚಿತ್ತಾಪುರ ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಶಿಕ್ಷಕರು, ಯುವ ಬರಹಗಾರರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...