Wednesday, April 22, 2026
Wednesday, April 22, 2026

ಪುಟ್ಟ ಪುಟ್ಟ ಹೆಜ್ಜೆಯಿರಿಸಿ ಗಡಿಯೊಳಕ್ಕೆ ಬಂದ ಪಾಕ್ ಪುಟಾಣಿ ಕಂದ

Date:

ಪಾಕಿಸ್ತಾನದಿಂದ 3 ವರ್ಷದ ಮಗು ನಿನ್ನೆ ತಡರಾತ್ರಿ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಬಂದಿತ್ತು. ಈ ಸಂದರ್ಭದಲ್ಲಿ ಮಗುವನ್ನು ನೋಡಿದ ಭದ್ರತಾ ಪಡೆ ಯೋಧರು ಮಗುವನ್ನು ರಕ್ಷಿಸಿ ಪಾಕಿಸ್ತಾನಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಗುವನ್ನು ಕುಟುಂಬಸ್ಥರ ಮಡಿಲಿಗೆ ಸೇರಿಸಿದ್ದಾರೆ.

ಪಂಜಾಬ್‌ನ ಹೆಚ್ಚಿನ ಭಾಗ ಪಾಕಿಸ್ತಾನದ ಗಡಿಯನ್ನು ಹಂಚಿಕೊಂಡಿದೆ. ಇದರಿಂದಾಗಿ ಅನೇಕ ಪಾಕಿಸ್ತಾನಿಗಳು ತಪ್ಪಾಗಿ ಪಂಜಾಬ್‌ನೊಳಗೆ ಬಂದು ಭಾರತವನ್ನು ಪ್ರವೇಶಿಸುತ್ತಾರೆ. ಇದೇ ರೀತಿ, ನಿನ್ನೆ ತಡರಾತ್ರಿ 3 ವರ್ಷದ ಮಗು ಎಲ್​ಒಸಿ ದಾಟಿ ಭಾರತ ಪ್ರವೇಶಿಸಿದೆ. ರಾತ್ರಿ ವೇಳೆ ಗಡಿ ಪ್ರದೇಶದಲ್ಲಿ ಮಗು ಒಂಟಿಯಾಗಿ ನಡೆದು ಬರುತ್ತಿದ್ದಾಗ ಕರ್ತವ್ಯದಲ್ಲಿದ್ದ ಗಡಿ ರಕ್ಷಕರ ಕಣ್ಣಿಗೆ ಬಿದ್ದಿದೆ. ಕತ್ತಲಲ್ಲಿ ಬಂದ ಮಗುವನ್ನು ಎತ್ತಿಕೊಂಡು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

3 ವರ್ಷದ ಮಗುವಿಗೆ ತನ್ನ ಸ್ಥಳದ ಬಗ್ಗೆ ಅರಿವಿಲ್ಲದ ಕಾರಣ ಭಾರತೀಯ ಅಧಿಕಾರಿಗಳು ಪಾಕಿಸ್ತಾನಿ ರೇಂಜರ್‌ನೊಂದಿಗೆ ಸಂಪರ್ಕ ಸಾಧಿಸಿ ಮಗುವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ತಪ್ಪಿಸಿಕೊಂಡು ಬಂದ ಮಗುವಿನ ಕುಟುಂಬದ ಮಾಹಿತಿ ಕಲೆ ಹಾಕಿದ ನಂತರ ಮರಳಿ ಮಗುವನ್ನು ಆ ಕುಟುಂಬದೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...