Thursday, February 13, 2025
Thursday, February 13, 2025

ಜಮೀನು ಸ್ವಾಧೀನದ ಪರಿಹಾರ90 ದಿನದೊಳಗೆ ನೀಡಲು ಚಿಂತನೆ

Date:

ಸರ್ಕಾರದ ಯೋಜನೆಗಳಿಗೆ, ಕೈಗಾರಿಕೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ.

ಆದರೆ, ಭೂ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ರೈತರು ಪರಿಹಾರ ಪಡೆದುಕೊಳ್ಳುವ ಪ್ರಕರಣ ಸಾವಿರಾರು ಇವೆ. ಇನ್ನು ಮುಂದೆ ಈ ರೀತಿ ನಡೆಯಕೂಡದು ಎಂದು ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಸಿದೆ.

ಕೆಲವು ಕಡೆ ಜಮೀನನ್ನು ಸ್ವಾಧೀನಪಡಿಸಿಕೊಂಡರೂ ರೈತರಿಗೆ ಪರಿಹಾರ ನೀಡದೆ ವಿಳಂಬ ಮಾಡಲಾಗಿದೆ ಎಂಬ ಆರೋಪವಿದೆ‌. ದಾಖಲೆಗಳು ಸರಿ ಇದ್ದರೆ, 90 ದಿನದೊಳಗೆ ಪರಿಹಾರ ನೀಡಲು ಇರುವ ಸಮಸ್ಯೆಯಾದರೂ ಏನು ಎಂದು ಇಲಾಖೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದ್ದಾರೆ.

ರೈತರ ಭೂಕಂದಾಯ ದಾಖಲೆಗಳು ಕಾನೂನಾತ್ಮಕವಾಗಿದ್ದರೆ, ಕೆಐಎಡಿಬಿಯಿಂದ ಸ್ವಾಧೀನಮಾಡಿಕೊಂಡ ಜಮೀನುಗಳಿಗೆ ಮೂರು ತಿಂಗಳಲ್ಲಿ ಪರಿಹಾರ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆಗಸ್ಟ್ 15 ರೊಳಗೆ ವಾಣಿಜ್ಯ ಕೈಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳನ್ನು ಇ-ಕಚೇರಿ ವ್ಯವಸ್ಥೆಗಳನ್ನಾಗಿ ಪರಿವರ್ತನೆ ಮಾಡಬೇಕು. ಒಂದು ವೇಳೆ ಆಗಸ್ಟ್ 15ರೊಳಗೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಇ ಕಚೇರಿ ವ್ಯವಸ್ಥೆಗಳನ್ನಾಗಿ ಪರಿವರ್ತನೆ ಮಾಡದೇ ಇದ್ದರೆ ಮುಖ್ಯ ಕಚೇರಿಗೆ ಬರುವ ಭೌತಿಕ ಕಡತ ಸ್ವೀಕಾರ ಮಾಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

ಕಂಪ್ಯೂಟರ್ ಇಲ್ಲ, ಸಿಬ್ಬಂದಿ ಇಲ್ಲ, ಕಚೇರಿ ಇಲ್ಲ ಇಂತಹ ಸಬೂಬುಗಳನ್ನು ಹೇಳಬಾರದು. ಇದಕ್ಕೆ ಬೇಕಾದ ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೇ ತಯಾರು ಮಾಡಿಕೊಳ್ಳಿ. ಇಲ್ಲದಿದ್ದರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಿಂದ ಬರುವ ಭೌತಿಕ ಕಡತಗಳನ್ನು ಹಿಂದಕ್ಕೆ ಕಳುಹಿಸುವುದಾಗಿ ಅಧಿಕಾರಿಗಳನ್ನು ಸಚಿವರು ಎಚ್ಚರಿಸಿದರು.

ಸಣ್ಣಪುಟ್ಟ ದೋಷಗಳನ್ನು ಮುಂದಿಟ್ಟುಕೊಂಡು ಕಡತ ವಿಲೇವಾರಿಯನ್ನು ವಿಳಂಬ ಮಾಡಬೇಡಿ. ವಿಳಂಬ ಮಾಡಿದರೆ ಉದ್ದಿಮೆದಾರರು ಕರ್ನಾಟಕಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.
ಕೆಐಎಡಿಬಿಯಿಂದ ಜಮೀನು ಪಡೆದುಕೊಂಡು ಕೈಗಾರಿಕೆಗಳನ್ನು ಸ್ಥಾಪನೆ ಮಾಡದೇ ಹಾಗೆ ಉಳಿಸಿಕೊಂಡಿದ್ದಾರೆ. ಅಂತಹ ಜಮೀನನ್ನು ತಕ್ಷಣವೇ ಗುರುತಿಸಬೇಕು. ಬಳಕೆಯಾಗದ ಭೂಮಿಯನ್ನು ನಾವು ಮುಲಾಜಿಲ್ಲದೇ ಹಿಂಪಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education and Literacy ಸಚಿವ ಮಧು ಬಂಗಾರಪ್ಪ‌‌‌ ಅವರ ಜಿಲ್ಲಾ ಪ್ರವಾಸ ಮಾಹಿತಿ

Department of School Education and Literacy ಶಾಲಾ ಶಿಕ್ಷಣ ಮತ್ತು...

Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ‌ ಮಧು‌‌ ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ

Indian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ...

Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ‌ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ

Mankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ...