Wednesday, April 22, 2026
Wednesday, April 22, 2026

ದೇಶದ ಅಭ್ಯುದಯದಲ್ಲಿ ವೈದ್ಯರ ಪಾತ್ರ ಗಣನೀಯ

Date:

ದೇಶದ ಅಭ್ಯುದ್ಯಯಕ್ಕೆ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ವೈದ್ಯರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಇವರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದು ಮಾಗಡಿ ರೋಟರಿ ಸಂಸ್ಥೆ ಅಧ್ಯಕ್ಷ ಕೆ.ಎಚ್‌.ಶಂಕರ್‌ ಅಭಿಪ್ರಾಯಪಟ್ಟರು.

ಮಾಗಡಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನದ ಪ್ರಯುಕ್ತ ವೈದ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಾವೆಲ್ಲರೂ ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದೇವೆ. ಆದರೆ, ಯಾವುದೇ ಭಯ, ಭೀತಿ, ಆತಂಕವಿಲ್ಲದೆ ವೈದ್ಯರು ಕೋವಿಡ್‌ ಸೋಂಕಿತ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಕೊಟ್ಟು ಅವರನ್ನು ಗುಣಮುಖರಾಗುವಂತೆ ಸೇವೆಯಲ್ಲಿ ನಿರತರಾಗಿದ್ದಾರೆ. ಅವರನ್ನು ಗೌರವಿಸುವುದು ನಾಗರಿಕರಾದ ನಮ್ಮೆಲ್ಲರ ಕರ್ತವ್ಯವಾಗಿದ್ದು, ವೈದ್ಯರ ದಿನದ ಪ್ರಯುಕ್ತ ವೈದ್ಯರೆಲ್ಲರನ್ನು ಸನ್ಮಾನಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ವೈದ್ಯೋ ಹರಿ ನಾರಾಯಣ ಎಂಬಂತೆ ವೈದ್ಯರು ರೋಗಿಗಳ ಪಾಲಿಗೆ ದೇವರೇ ಆಗಿರುತ್ತಾರೆ. ಸರ್ಕಾರಿ ಆಸ್ಪತ್ರೆ ಕೇವಲ ಬಡವರಿಗಾಗಿ ಮಾತ್ರವಲ್ಲದೆ, ಶ್ರೀಮಂತರು ಸಹ ತಮ್ಮ ಆರೋಗ್ಯವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕೆಂಬ ವಾತಾವರಣವನ್ನು ವೈದ್ಯರು ಸೃಷ್ಠಿಸಿದ್ದಾರೆ. ಇಲ್ಲಿನ ವೈದ್ಯರ ಅವಿರತ ನಿಸ್ವಾರ್ಥ ಸೇವೆ ಅನನ್ಯವಾದುದು ಎಂದರು.

ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್‌ ಮಾತನಾಡಿ, ಸರ್ಕಾರ ಸರ್ಕಾರಿ ಆಸ್ಪತ್ರೆಯನ್ನು ಕೇವಲ ಬಡರಿಗೆ ಮಾತ್ರ ತೆರೆದಿಲ್ಲ, ಶ್ರೀಮಂತರೂ ಸಹ ಇಲ್ಲಿನ ಸೇವೆಯನ್ನು ಪಡೆದುಕೊಳ್ಳುವಂತ ವಾತಾವರಣ ಸರ್ಕಾರ ನಿರ್ಮಿಸಿದೆ. ಸರ್ಕಾರ ಆಸ್ಪತ್ರೆಗಳಿಗೆ ಸಾಕಷ್ಟು ಅನುದಾನ ಹಾಗೂ ಸೌಲಭ್ಯಗಳನ್ನು ನೀಡಿದೆ. ಜೊತೆಗೆ ಸಮಾಜ ಸೇವಕರು, ಮುಖಂಡರು ಸಹ ಆಸ್ಪತ್ರೆಯ ಉನ್ನತೀಕರಣಕ್ಕೆ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಕಾರ್ಯದರ್ಶಿ ಮುನಿಯಪ್ಪ, ವೃತ್ತಿಪರ ಸೇವಾ ಅಧ್ಯಕ್ಷ ನರಸಿಂಹಯ್ಯ, ರೋಟರಿಯನ್‌ ಗಳಾದ ವೇಣುಗೋಪಾಲ್‌, ಎಲ್‌.ಪ್ರಭಾಕರ್‌, ಮನು, ದಕ್ಷಿಣಮೂರ್ತಿ, ಗಣೇಶ್‌, ನಾಗೇಶ್‌, ಡಾ, ಮಂಜುನಾಥ್‌, ಆಸ್ಪತ್ರೆಯ ಡಾ. ನಾಗನಾಥ್‌, ಡಾ. ರಾಕೇಶ್‌, ಡಾ.ರಫೀಕ್‌, ಡಾ. ವಿವೇಕಾನಂದ ಡಾ. ಮುದೊಳೆ, ಡಾ. ಚಂದ್ರಲೇಖಾ ಡಾ. ರಶ್ಮಿ,, ಡಾ.ನವೀನ್‌, ನರ್ಸ್‌ ಪದ್ಮಾ, ಗುಣಶೇಖರ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕನ್ನಡ ಸಾರಸ್ವತ ಲೋಕದ ಧೃವತಾರೆ: ಗಳಗನಾಥರು ...

Klive Special Article ಆಧ್ಯಾತ್ಮ ರಶ್ಮಿ -4ಪುಸ್ತಕ ಸಂತ –...

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...