Thursday, August 13, 2026
Thursday, August 13, 2026

ದೇಶದ ಅಭ್ಯುದಯದಲ್ಲಿ ವೈದ್ಯರ ಪಾತ್ರ ಗಣನೀಯ

Date:

ದೇಶದ ಅಭ್ಯುದ್ಯಯಕ್ಕೆ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ವೈದ್ಯರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಇವರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದು ಮಾಗಡಿ ರೋಟರಿ ಸಂಸ್ಥೆ ಅಧ್ಯಕ್ಷ ಕೆ.ಎಚ್‌.ಶಂಕರ್‌ ಅಭಿಪ್ರಾಯಪಟ್ಟರು.

ಮಾಗಡಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನದ ಪ್ರಯುಕ್ತ ವೈದ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಾವೆಲ್ಲರೂ ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದೇವೆ. ಆದರೆ, ಯಾವುದೇ ಭಯ, ಭೀತಿ, ಆತಂಕವಿಲ್ಲದೆ ವೈದ್ಯರು ಕೋವಿಡ್‌ ಸೋಂಕಿತ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಕೊಟ್ಟು ಅವರನ್ನು ಗುಣಮುಖರಾಗುವಂತೆ ಸೇವೆಯಲ್ಲಿ ನಿರತರಾಗಿದ್ದಾರೆ. ಅವರನ್ನು ಗೌರವಿಸುವುದು ನಾಗರಿಕರಾದ ನಮ್ಮೆಲ್ಲರ ಕರ್ತವ್ಯವಾಗಿದ್ದು, ವೈದ್ಯರ ದಿನದ ಪ್ರಯುಕ್ತ ವೈದ್ಯರೆಲ್ಲರನ್ನು ಸನ್ಮಾನಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ವೈದ್ಯೋ ಹರಿ ನಾರಾಯಣ ಎಂಬಂತೆ ವೈದ್ಯರು ರೋಗಿಗಳ ಪಾಲಿಗೆ ದೇವರೇ ಆಗಿರುತ್ತಾರೆ. ಸರ್ಕಾರಿ ಆಸ್ಪತ್ರೆ ಕೇವಲ ಬಡವರಿಗಾಗಿ ಮಾತ್ರವಲ್ಲದೆ, ಶ್ರೀಮಂತರು ಸಹ ತಮ್ಮ ಆರೋಗ್ಯವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕೆಂಬ ವಾತಾವರಣವನ್ನು ವೈದ್ಯರು ಸೃಷ್ಠಿಸಿದ್ದಾರೆ. ಇಲ್ಲಿನ ವೈದ್ಯರ ಅವಿರತ ನಿಸ್ವಾರ್ಥ ಸೇವೆ ಅನನ್ಯವಾದುದು ಎಂದರು.

ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್‌ ಮಾತನಾಡಿ, ಸರ್ಕಾರ ಸರ್ಕಾರಿ ಆಸ್ಪತ್ರೆಯನ್ನು ಕೇವಲ ಬಡರಿಗೆ ಮಾತ್ರ ತೆರೆದಿಲ್ಲ, ಶ್ರೀಮಂತರೂ ಸಹ ಇಲ್ಲಿನ ಸೇವೆಯನ್ನು ಪಡೆದುಕೊಳ್ಳುವಂತ ವಾತಾವರಣ ಸರ್ಕಾರ ನಿರ್ಮಿಸಿದೆ. ಸರ್ಕಾರ ಆಸ್ಪತ್ರೆಗಳಿಗೆ ಸಾಕಷ್ಟು ಅನುದಾನ ಹಾಗೂ ಸೌಲಭ್ಯಗಳನ್ನು ನೀಡಿದೆ. ಜೊತೆಗೆ ಸಮಾಜ ಸೇವಕರು, ಮುಖಂಡರು ಸಹ ಆಸ್ಪತ್ರೆಯ ಉನ್ನತೀಕರಣಕ್ಕೆ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಕಾರ್ಯದರ್ಶಿ ಮುನಿಯಪ್ಪ, ವೃತ್ತಿಪರ ಸೇವಾ ಅಧ್ಯಕ್ಷ ನರಸಿಂಹಯ್ಯ, ರೋಟರಿಯನ್‌ ಗಳಾದ ವೇಣುಗೋಪಾಲ್‌, ಎಲ್‌.ಪ್ರಭಾಕರ್‌, ಮನು, ದಕ್ಷಿಣಮೂರ್ತಿ, ಗಣೇಶ್‌, ನಾಗೇಶ್‌, ಡಾ, ಮಂಜುನಾಥ್‌, ಆಸ್ಪತ್ರೆಯ ಡಾ. ನಾಗನಾಥ್‌, ಡಾ. ರಾಕೇಶ್‌, ಡಾ.ರಫೀಕ್‌, ಡಾ. ವಿವೇಕಾನಂದ ಡಾ. ಮುದೊಳೆ, ಡಾ. ಚಂದ್ರಲೇಖಾ ಡಾ. ರಶ್ಮಿ,, ಡಾ.ನವೀನ್‌, ನರ್ಸ್‌ ಪದ್ಮಾ, ಗುಣಶೇಖರ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...