Tuesday, December 16, 2025
Tuesday, December 16, 2025

ಭಯೋತ್ಪಾದಕರನ್ನ ಹೆಡೆಮುರಿ ಕಟ್ಟಿದ ಗ್ರಾಮಸ್ಥರು

Date:

ಭಾನುವಾರ ಎಲ್‌ಇಟಿಯ ಇಬ್ಬರು ಭಯೋತ್ಪಾದಕರನ್ನು ಅಲ್ಲಿನ ಗ್ರಾಮಸ್ಥರೇ ಬಂಧಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ ಸೈನಿಕರಷ್ಟೇ ಉಗ್ರರನ್ನು ಬಂಧಿಸಲು ಸಾಧ್ಯವಾಗುತ್ತಿತ್ತು.ಆದರೆ, ಈಗ ರಿಯಾಸಿ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಗ್ರಾಮಸ್ಥರೇ ಬಂಧಿಸಿದ್ದಾರೆ.

ತಮ್ಮಿಂದ ಉಗ್ರರನ್ನು ಬಂಧಿಸಲು ಹೇಗೆ ಸಾಧ್ಯವಾಯಿತು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಗ್ರಾಮಸ್ಥನೊಬ್ಬರು, ನನಗೆ ನನ್ನ ಅಣ್ಣನಿಂದ ಕರೆ ಬಂದಿತ್ತು. ಇಬ್ಬರು ಉಗ್ರರು ತನ್ನನ್ನು ಕೊಲ್ಲಲು ಬರುತ್ತಿರುವುದಾಗಿ ತಿಳಿಸಿದ್ದ. ತಕ್ಷಣ ಆತ ಹೇಳಿದ ಪ್ರದೇಶಕ್ಕೆ ನಾನು ನನ್ನ ಸೋದರ ಸಂಬಂಧಿಗಳೊಂದಿಗೆ ಹೋದೆವು. ಆ ಸಂದರ್ಭ ಅಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮಲಗಿರುವುದು ಕಂಡುಬಂದಿತು. ನಾವೆಲ್ಲಾ ಸೇರಿ ಅವರಿಬ್ಬರನ್ನು ಸೆರೆ ಹಿಡಿಯಲು ಬೆಳಗ್ಗೆಯವರೆಗೂ ಕಾದು ಕುಳಿತಿದ್ದೆವು ಎಂದು ವಿವರಿಸಿದ್ದಾರೆ.

ಅವರು ಮಲಗಿದ್ದ ಸಂದರ್ಭದಲ್ಲಿ ಅವರ ಶಸ್ತ್ರಾಸ್ತ್ರಗಳಿದ್ದ ಬ್ಯಾಗ್ ಅನ್ನು ನಾವು ಹೊರತೆಗೆದೆವು. ಈ ವೇಳೆ ಅವರಲ್ಲಿ ಒಬ್ಬ ಎಚ್ಚರಗೊಂಡು ಓಡಿ ಹೋಗಲು ಪ್ರಯತ್ನಿಸಿದರು. ಆದರೆ ನಾವು ಅವರನ್ನು ಹಿಡಿದು, ಹಗ್ಗಗಳಿಂದ ಕಟ್ಟಿ ಹಾಕಿದೆವು. ತಕ್ಷಣವೇ ಪೊಲೀಸರಿಗೆ ಕರೆ ಮಾಡಿದೆವು. ಕೆಲವೇ ಹೊತ್ತಿನಲ್ಲಿ ಪೊಲೀಸರು ಸ್ಥಳಕ್ಕೆ ಬಂದು, ಉಗ್ರರನ್ನು ಅವರ ಕೈಗೆ ಒಪ್ಪಿಸಿದೆವು ಎಂದು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಬದುಕಲು ಹೆದರುವಂತಹ ಪರಿಸ್ಥಿತಿ ಇತ್ತು.ಆದರೆ ಈಗ ಅದಕ್ಕೆಲ್ಲಾ ವ್ಯತಿರಿಕ್ತ ಎನ್ನುವಂತೆ ರಿಯಾಸಿ ಜಿಲ್ಲೆಯಲ್ಲಿ ನಡೆದ ಐಇಡಿ ಸ್ಫೋಟದ ರೂವಾರಿ ಲಷ್ಕರ್ ಮಾಂಡರ್ ತಾಲಿಬ್ ಹುಸೇನ್‌ನನ್ನು ಗ್ರಾಮಸ್ಥರೇ ಸದೆಬಡೆದು ಬಳಿಕ ಟುಕ್ಸಾನ್‌ನಲ್ಲಿ ಭದ್ರತಾ ಪಡೆಗಳಿಗೆ ಒಪ್ಪಿಸಿದ್ದಾರೆ. ಈತನ ಜೊತೆಗೆ ಮತ್ತೊಬ್ಬ ಉಗ್ರ ಫೈಝುಲ್ ಅಹಮದ್ ದಾರ್‌ನನ್ನು ಗ್ರಾಮಸ್ಥರು ಬಂಧಿಸಿದ್ದಾರೆ.

ಉಗ್ರರ ಹತ್ತಿರ 2 ಎಕೆ 47 ರೈಫಲ್‌ಗಳು, 7 ಗ್ರೆನೇಡ್‌ಗಳು, ಮತ್ತು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಈಗ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಗ್ರಾಮಸ್ಥರ ಧೈರ್ಯ, ಸಾಹಸವನ್ನು ಶ್ಲಾಘಿಸಿ, 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...