Sunday, April 19, 2026
Sunday, April 19, 2026

ಭಯೋತ್ಪಾದಕರನ್ನ ಹೆಡೆಮುರಿ ಕಟ್ಟಿದ ಗ್ರಾಮಸ್ಥರು

Date:

ಭಾನುವಾರ ಎಲ್‌ಇಟಿಯ ಇಬ್ಬರು ಭಯೋತ್ಪಾದಕರನ್ನು ಅಲ್ಲಿನ ಗ್ರಾಮಸ್ಥರೇ ಬಂಧಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ ಸೈನಿಕರಷ್ಟೇ ಉಗ್ರರನ್ನು ಬಂಧಿಸಲು ಸಾಧ್ಯವಾಗುತ್ತಿತ್ತು.ಆದರೆ, ಈಗ ರಿಯಾಸಿ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಗ್ರಾಮಸ್ಥರೇ ಬಂಧಿಸಿದ್ದಾರೆ.

ತಮ್ಮಿಂದ ಉಗ್ರರನ್ನು ಬಂಧಿಸಲು ಹೇಗೆ ಸಾಧ್ಯವಾಯಿತು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಗ್ರಾಮಸ್ಥನೊಬ್ಬರು, ನನಗೆ ನನ್ನ ಅಣ್ಣನಿಂದ ಕರೆ ಬಂದಿತ್ತು. ಇಬ್ಬರು ಉಗ್ರರು ತನ್ನನ್ನು ಕೊಲ್ಲಲು ಬರುತ್ತಿರುವುದಾಗಿ ತಿಳಿಸಿದ್ದ. ತಕ್ಷಣ ಆತ ಹೇಳಿದ ಪ್ರದೇಶಕ್ಕೆ ನಾನು ನನ್ನ ಸೋದರ ಸಂಬಂಧಿಗಳೊಂದಿಗೆ ಹೋದೆವು. ಆ ಸಂದರ್ಭ ಅಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮಲಗಿರುವುದು ಕಂಡುಬಂದಿತು. ನಾವೆಲ್ಲಾ ಸೇರಿ ಅವರಿಬ್ಬರನ್ನು ಸೆರೆ ಹಿಡಿಯಲು ಬೆಳಗ್ಗೆಯವರೆಗೂ ಕಾದು ಕುಳಿತಿದ್ದೆವು ಎಂದು ವಿವರಿಸಿದ್ದಾರೆ.

ಅವರು ಮಲಗಿದ್ದ ಸಂದರ್ಭದಲ್ಲಿ ಅವರ ಶಸ್ತ್ರಾಸ್ತ್ರಗಳಿದ್ದ ಬ್ಯಾಗ್ ಅನ್ನು ನಾವು ಹೊರತೆಗೆದೆವು. ಈ ವೇಳೆ ಅವರಲ್ಲಿ ಒಬ್ಬ ಎಚ್ಚರಗೊಂಡು ಓಡಿ ಹೋಗಲು ಪ್ರಯತ್ನಿಸಿದರು. ಆದರೆ ನಾವು ಅವರನ್ನು ಹಿಡಿದು, ಹಗ್ಗಗಳಿಂದ ಕಟ್ಟಿ ಹಾಕಿದೆವು. ತಕ್ಷಣವೇ ಪೊಲೀಸರಿಗೆ ಕರೆ ಮಾಡಿದೆವು. ಕೆಲವೇ ಹೊತ್ತಿನಲ್ಲಿ ಪೊಲೀಸರು ಸ್ಥಳಕ್ಕೆ ಬಂದು, ಉಗ್ರರನ್ನು ಅವರ ಕೈಗೆ ಒಪ್ಪಿಸಿದೆವು ಎಂದು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಬದುಕಲು ಹೆದರುವಂತಹ ಪರಿಸ್ಥಿತಿ ಇತ್ತು.ಆದರೆ ಈಗ ಅದಕ್ಕೆಲ್ಲಾ ವ್ಯತಿರಿಕ್ತ ಎನ್ನುವಂತೆ ರಿಯಾಸಿ ಜಿಲ್ಲೆಯಲ್ಲಿ ನಡೆದ ಐಇಡಿ ಸ್ಫೋಟದ ರೂವಾರಿ ಲಷ್ಕರ್ ಮಾಂಡರ್ ತಾಲಿಬ್ ಹುಸೇನ್‌ನನ್ನು ಗ್ರಾಮಸ್ಥರೇ ಸದೆಬಡೆದು ಬಳಿಕ ಟುಕ್ಸಾನ್‌ನಲ್ಲಿ ಭದ್ರತಾ ಪಡೆಗಳಿಗೆ ಒಪ್ಪಿಸಿದ್ದಾರೆ. ಈತನ ಜೊತೆಗೆ ಮತ್ತೊಬ್ಬ ಉಗ್ರ ಫೈಝುಲ್ ಅಹಮದ್ ದಾರ್‌ನನ್ನು ಗ್ರಾಮಸ್ಥರು ಬಂಧಿಸಿದ್ದಾರೆ.

ಉಗ್ರರ ಹತ್ತಿರ 2 ಎಕೆ 47 ರೈಫಲ್‌ಗಳು, 7 ಗ್ರೆನೇಡ್‌ಗಳು, ಮತ್ತು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಈಗ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಗ್ರಾಮಸ್ಥರ ಧೈರ್ಯ, ಸಾಹಸವನ್ನು ಶ್ಲಾಘಿಸಿ, 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...