Thursday, December 11, 2025
Thursday, December 11, 2025

ಪಿಎಸ್ಐ ನೇಮಕಾತಿ ಹಗರಣ: ಗೃಹಸಚಿವರು ರಾಜಿನಾಮೆ ಕೊಡಲಿ

Date:

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಿಧಾನ ಮಂಡಲದ ದಾರಿ ತಪ್ಪಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕಲು ಯಾರೆಲ್ಲಾ ರಾಜಕಾರಣಿಗಳು ಒತ್ತಡ ಹೇರಿದ್ದರೊ ಅವರೆಲ್ಲರ ಹೆಸರನ್ನು ಆತ್ಮಸಾಕ್ಷಿಯಿಂದ ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಈ ಹಗರಣದ ಬಗ್ಗೆ ನಾನು ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆಯಾಗಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಗೃಹ ಸಚಿವರು ಹೇಳಿದ್ದರು. ಆದರೆ, ಇದೀಗ ಈ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮ್ರಿತ್‌ ಪೌಲ್ ಬಂಧನವಾಗಿದೆ. ಅಕ್ರಮ ನಡೆದಿರುವುದನ್ನು ಗೃಹ ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಮಾಗಡಿಯ ಅಭ್ಯರ್ಥಿಯನ್ನು ವಿಚಾರಣೆ ಮಾಡದಂತೆ ಯಾರು ಬೆಂಬಲವಾಗಿ ನಿಂತರು. ಆ ಅಭ್ಯರ್ಥಿಯನ್ನು ಬಿಟ್ಟು ಕಳುಹಿಸಿದ್ದು ಯಾಕೆ? ಬಳಿಕ 20 ದಿನ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿ ಮತ್ತೆ ಆತನನ್ನು ವಿಚಾರಣೆಗೆ ಕರೆತಂದದ್ದು, ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಗರಣ ಮುಚ್ಚಿ ಹಾಕಲು ಸರ್ಕಾರ ದೊಡ್ಡ ಪ್ರಯತ್ನ ನಡೆಸಿತು. ಗೃಹ ಸಚಿವರು ಹಾಗೂ ದೊಡ್ಡ ಅಧಿಕಾರಿಗಳ ಭಾಗಿಯ ಬಗ್ಗೆ ನಾವು ಆರೋಪ ಮಾಡಿದೆವು. ಅಕ್ರಮವಾಗಿ ಹಣ್ಣು ತಿಂದವರನ್ನು ಮಾತ್ರ ಹಿಡಿದ್ದಾರೆ. ಅಕ್ರಮವಾಗಿ ಹಣ್ಣು ಮಾರಿದವರನ್ನು ಹಿಡಿಯಲಿಲ್ಲ. ಈ ಪ್ರಕರಣದಿಂದ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...