Wednesday, June 24, 2026
Wednesday, June 24, 2026

ಪಿಎಸ್ಐ ನೇಮಕಾತಿ ಹಗರಣ: ಗೃಹಸಚಿವರು ರಾಜಿನಾಮೆ ಕೊಡಲಿ

Date:

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಿಧಾನ ಮಂಡಲದ ದಾರಿ ತಪ್ಪಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕಲು ಯಾರೆಲ್ಲಾ ರಾಜಕಾರಣಿಗಳು ಒತ್ತಡ ಹೇರಿದ್ದರೊ ಅವರೆಲ್ಲರ ಹೆಸರನ್ನು ಆತ್ಮಸಾಕ್ಷಿಯಿಂದ ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಈ ಹಗರಣದ ಬಗ್ಗೆ ನಾನು ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆಯಾಗಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಗೃಹ ಸಚಿವರು ಹೇಳಿದ್ದರು. ಆದರೆ, ಇದೀಗ ಈ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮ್ರಿತ್‌ ಪೌಲ್ ಬಂಧನವಾಗಿದೆ. ಅಕ್ರಮ ನಡೆದಿರುವುದನ್ನು ಗೃಹ ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಮಾಗಡಿಯ ಅಭ್ಯರ್ಥಿಯನ್ನು ವಿಚಾರಣೆ ಮಾಡದಂತೆ ಯಾರು ಬೆಂಬಲವಾಗಿ ನಿಂತರು. ಆ ಅಭ್ಯರ್ಥಿಯನ್ನು ಬಿಟ್ಟು ಕಳುಹಿಸಿದ್ದು ಯಾಕೆ? ಬಳಿಕ 20 ದಿನ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿ ಮತ್ತೆ ಆತನನ್ನು ವಿಚಾರಣೆಗೆ ಕರೆತಂದದ್ದು, ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಗರಣ ಮುಚ್ಚಿ ಹಾಕಲು ಸರ್ಕಾರ ದೊಡ್ಡ ಪ್ರಯತ್ನ ನಡೆಸಿತು. ಗೃಹ ಸಚಿವರು ಹಾಗೂ ದೊಡ್ಡ ಅಧಿಕಾರಿಗಳ ಭಾಗಿಯ ಬಗ್ಗೆ ನಾವು ಆರೋಪ ಮಾಡಿದೆವು. ಅಕ್ರಮವಾಗಿ ಹಣ್ಣು ತಿಂದವರನ್ನು ಮಾತ್ರ ಹಿಡಿದ್ದಾರೆ. ಅಕ್ರಮವಾಗಿ ಹಣ್ಣು ಮಾರಿದವರನ್ನು ಹಿಡಿಯಲಿಲ್ಲ. ಈ ಪ್ರಕರಣದಿಂದ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...