Wednesday, December 10, 2025
Wednesday, December 10, 2025

ಮಹಾ ಅಧಿವೇಶನದಲ್ಲಿ ಸಿಎಂ ಶಿಂಧೆ ಭಾವೋದ್ವೇಗ ಭಾಷಣ

Date:

ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದ ಬಳಿಕ ಮುಖ್ಯಮಂತ್ರಿಯಾಗಿ ತನ್ನ ಮೊದಲ ಭಾಷಣ ಮಾಡಿದ ಏಕನಾಥ ಶಿಂದೆ ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ತನ್ನ ಬಂಡಾಯಕ್ಕಾಗಿ ತನ್ನ ಕುಟುಂಬಕ್ಕೆ ಬೆದರಿಕೆಗಳು ಬಂದಿದ್ದವು ಎಂದ ಶಿಂದೆ ಮೃತಪಟ್ಟಿರುವ ತನ್ನಿಬ್ಬರು ಮಕ್ಕಳನ್ನು ನೆನೆದುಕೊಂಡು ದುಃಖವನ್ನು ತಡೆಯದೆ ಉಮ್ಮಳಿಸಿದರು.

ಅವರು ನನ್ನ ಕುಟುಂಬದ ಮೇಲೆ ದಾಳಿ ಮಾಡಿದ್ದರು. ನನ್ನ ತಂದೆ ಬದುಕಿದ್ದಾರೆ,ತಾಯಿ ಮೃತ ಪಟ್ಟಿದ್ದಾರೆ. ನಾನು ನನ್ನ ಹೆತ್ತವರಿಗೆ ಹೆಚ್ಚಿನ ಸಮಯ ನೀಡಲಾಗಲಿಲ್ಲ. ನಾನು ಮನೆಗೆ ಮರಳಿದಾಗ ಅವರು ಮಲಗಿರುತ್ತಿದ್ದರು,ನಾನು ಬೆಳಿಗ್ಗೆ ಮಲಗಿದ್ದಾಗ ಅವರು ಕೆಲಸಕ್ಕೆ ಹೋಗಿರುತ್ತಿದ್ದರು.

ನನ್ನ ಮಗ ಶ್ರೀಕಾಂತನಿಗೆ ಹೆಚ್ಚು ಸಮಯ ನೀಡಲು ನನಗೆ ಸಾಧ್ಯವಾಗಿರಲಿಲ್ಲ. ನನ್ನ ಇಬ್ಬರು ಮಕ್ಕಳು ಮೃತಪಟ್ಟಾಗ ಶಿವಸೇನೆಯ ಹಿರಿಯ ನಾಯಕ ಆನಂದ ನನಗೆ ಸಾಂತ್ವನ ಹೇಳಿದ್ದರು. ಬದುಕಿರುವುದರಲ್ಲಿ ಏನು ಅರ್ಥವಿದೆ ಎಂದು ನಾನು ಯೋಚಿಸುತ್ತಿದ್ದೆ. ಕಣ್ಣೀರನ್ನು ಒರೆಸಿಕೋ,ಇತರರ ಕಣ್ಣೀರನ್ನೂ ಒರೆಸು ಎಂದು ಹೇಳಿದ್ದಾರೆ.

ನಾನು ಚೇತರಿಸಿಕೊಳ್ಳಲು ನೆರವಾಗಿದ್ದರು. ಹಾಗೂ ವಿಧಾನಸಭೆಯಲ್ಲಿ ನನ್ನನ್ನು ಶಿವಸೇನೆ ನಾಯಕನನ್ನಾಗಿ ಮಾಡಿದ್ದರು ಎಂದು ಶಿಂದೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...