Friday, April 18, 2025
Friday, April 18, 2025

ಕಲ್ಯಾಣ ಕರ್ನಾಟಕಕ್ಕೆ 5000 ಶಿಕ್ಷಕರನ್ನ ನೀಡಲಾಗುತ್ತದೆ

Date:

ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಅಳವಡಿಸಿರುವ ಮಳೆ ನೀರು ಕೊಯ್ಲು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಅದನ್ನು ನಿವಾರಿಸಲು ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. 371ಜೆ ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಕೊರೋನಾ ಕಾರಣದಿಂದ ಕಳೆದ ವರ್ಷ ಸರಿಯಾಗಿ ಶಾಲೆಗಳು ನಡೆಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದೆ. ಆದ್ದರಿಂದ, ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಿದ ಬಳಿಕವೇ ಪಠ್ಯ ಬೋಧನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....