Wednesday, April 22, 2026
Wednesday, April 22, 2026

ಭದ್ರಾ ಜಲಾಶಯಕ್ಕೆ ಮೂರು ಅಡಿ ನೀರು ಹೆಚ್ಚಳ

Date:

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ನದಿ ಪಾತ್ರದ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದೆ. ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ.

ಜುಲೈ ತಿಂಗಳ ಮೊದಲ 4 ದಿನಗಳಲ್ಲಿ ಜಲಾಶಯದಲ್ಲಿ ನೀರಿನ ಪ್ರಮಾಣ 3 ಅಡಿಯಷ್ಟು ಹೆಚ್ಚಳಗೊಂಡಿದೆ.

ಆರಿದ್ರೆಯ ಆರ್ಭಟದ ಫಲವಾಗಿ ಜುಲೈ 1ರಿಂದ 4ರವರೆಗೆ ಭದ್ರಾ ಜಲಾಶಯಕ್ಕೆ 33,964 ಕ್ಯುಸೆಕ್ ನೀರು ಹರಿದುಬಂದಿದೆ. ಜುಲೈ 1ರಂದು 3,717 ಕ್ಯುಸೆಕ್ ಇದ್ದ ಒಳಹರಿವಿನ ಪ್ರಮಾಣ, ಸೋಮವಾರ 13,405 ಕ್ಯುಸೆಕ್‌ಗೆ ಹೆಚ್ಚಳಗೊಂಡಿತ್ತು. ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿ ಇದ್ದು, ಜಲಾಶಯದಲ್ಲಿ ಶುಕ್ರವಾರ 152.6 ಅಡಿ ಇದ್ದ ನೀರಿನ ಪ್ರಮಾಣ ಸೋಮವಾರ 155.7 ಅಡಿಗೆ ಏರಿಕೆಯಾಗಿತ್ತು. ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ನೀರಿನ ಮಟ್ಟ 165 ಅಡಿಗೆ ಹೆಚ್ಚಳವಾಗಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕನ್ನಡ ಸಾರಸ್ವತ ಲೋಕದ ಧೃವತಾರೆ: ಗಳಗನಾಥರು ...

Klive Special Article ಆಧ್ಯಾತ್ಮ ರಶ್ಮಿ -4ಪುಸ್ತಕ ಸಂತ –...

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...