Wednesday, March 12, 2025
Wednesday, March 12, 2025

ಕಾಮೆಡ್ ಕೆ ಪರೀಕ್ಷೆ ಪ್ರಥಮ ಹತ್ತರಲ್ಲಿ ರಾಜ್ಯದ ಐವರು

Date:

ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಕಾಮೆಡ್ ಕೆ ನಡೆಸಿದ್ದ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ಮೊದಲ 10 ರ್‍ಯಾಂಕ್‌ಗಳಲ್ಲಿ 5 ಬೆಂಗಳೂರಿನ ಪಾಲಾಗಿವೆ.

ತಮಿಳುನಾಡು ಹೊಸೂರಿನ ಎ.ವೆಂಕಟ್‌ ಪ್ರಥಮ, ಬೆಂಗಳೂರಿನ ವಿಶಾಲ್‌ ಬೈಸಾನಿ ದ್ವಿತೀಯ, ಅಪೂರ್ವ್‌ ಟಂಡನ್‌ ತೃತೀಯ ರ್‍ಯಾಂಕ್ ಪಡೆದಿದ್ದಾರೆ.

ಮೊದಲ 100 ರ‍್ಯಾಂಕ್‌ಗಳಲ್ಲಿ 52 ರ‍್ಯಾಂಕ್‌ಗಳನ್ನು ಗಳಿಸುವ ಮೂಲಕ ಕರ್ನಾಟಕದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ದೇಶದ 154 ನಗರಗಳ 230 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 19ರಂದು ಆನ್‌ಲೈನ್‌ ಮೂಲಕ ಪರೀಕ್ಷೆ ನಡೆದಿತ್ತು. 61,635 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 57,387 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಅರ್ಹ ಅಭ್ಯರ್ಥಿಗಳ ರ್‍ಯಾಂಕ್‌ ಕಾರ್ಡ್‌ಗಳನ್ನು ರಚಿಸಲಾಗಿದೆ. ಕಾಮೆಡ್‌-ಕೆ ವೆಬ್‌ಸೈಟ್ www.comedk.orgನ ಅರ್ಜಿದಾರರ ಲಾಗಿನ್‌ನಲ್ಲಿ ಅಭ್ಯರ್ಥಿಗಳಿಗೆ ಮಾಹಿತಿ ಲಭ್ಯವಾಗಲಿದೆ. ಆನ್‌ಲೈನ್ ಮೋಡ್‌ನಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಲಾಗಿನ್ ಮೂಲಕ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕು. ನಂತರ ದಾಖಲೆಗಳನ್ನು ಪರಿಣತ ಪರಿಶೀಲನಾ ಅಧಿಕಾರಿಗಳ ಸಮಿತಿ ಪರಿಶೀಲಿಸುತ್ತದೆ. ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುತ್ತದೆ ಎಂದು ಕಾಮೆಡ್‌ ಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸೇರಲು ಸಮ್ಮತಿ ನೀಡಿದೆ. ಇದು ಕಾಮೆಡ್‌ ಕೆ ಪರೀಕ್ಷೆಯ ಕೊನೆಯ ಫಲಿತಾಂಶವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...