Monday, December 15, 2025
Monday, December 15, 2025

ಕಾಮೆಡ್ ಕೆ ಪರೀಕ್ಷೆ ಪ್ರಥಮ ಹತ್ತರಲ್ಲಿ ರಾಜ್ಯದ ಐವರು

Date:

ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಕಾಮೆಡ್ ಕೆ ನಡೆಸಿದ್ದ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ಮೊದಲ 10 ರ್‍ಯಾಂಕ್‌ಗಳಲ್ಲಿ 5 ಬೆಂಗಳೂರಿನ ಪಾಲಾಗಿವೆ.

ತಮಿಳುನಾಡು ಹೊಸೂರಿನ ಎ.ವೆಂಕಟ್‌ ಪ್ರಥಮ, ಬೆಂಗಳೂರಿನ ವಿಶಾಲ್‌ ಬೈಸಾನಿ ದ್ವಿತೀಯ, ಅಪೂರ್ವ್‌ ಟಂಡನ್‌ ತೃತೀಯ ರ್‍ಯಾಂಕ್ ಪಡೆದಿದ್ದಾರೆ.

ಮೊದಲ 100 ರ‍್ಯಾಂಕ್‌ಗಳಲ್ಲಿ 52 ರ‍್ಯಾಂಕ್‌ಗಳನ್ನು ಗಳಿಸುವ ಮೂಲಕ ಕರ್ನಾಟಕದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ದೇಶದ 154 ನಗರಗಳ 230 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 19ರಂದು ಆನ್‌ಲೈನ್‌ ಮೂಲಕ ಪರೀಕ್ಷೆ ನಡೆದಿತ್ತು. 61,635 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 57,387 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಅರ್ಹ ಅಭ್ಯರ್ಥಿಗಳ ರ್‍ಯಾಂಕ್‌ ಕಾರ್ಡ್‌ಗಳನ್ನು ರಚಿಸಲಾಗಿದೆ. ಕಾಮೆಡ್‌-ಕೆ ವೆಬ್‌ಸೈಟ್ www.comedk.orgನ ಅರ್ಜಿದಾರರ ಲಾಗಿನ್‌ನಲ್ಲಿ ಅಭ್ಯರ್ಥಿಗಳಿಗೆ ಮಾಹಿತಿ ಲಭ್ಯವಾಗಲಿದೆ. ಆನ್‌ಲೈನ್ ಮೋಡ್‌ನಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಲಾಗಿನ್ ಮೂಲಕ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕು. ನಂತರ ದಾಖಲೆಗಳನ್ನು ಪರಿಣತ ಪರಿಶೀಲನಾ ಅಧಿಕಾರಿಗಳ ಸಮಿತಿ ಪರಿಶೀಲಿಸುತ್ತದೆ. ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುತ್ತದೆ ಎಂದು ಕಾಮೆಡ್‌ ಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸೇರಲು ಸಮ್ಮತಿ ನೀಡಿದೆ. ಇದು ಕಾಮೆಡ್‌ ಕೆ ಪರೀಕ್ಷೆಯ ಕೊನೆಯ ಫಲಿತಾಂಶವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...