Friday, March 6, 2026
Friday, March 6, 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ:ಆರೇಂಜ್ ಅಲರ್ಟ್

Date:

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದೆ .

ಕುಂಬಳೆಯ ಪ್ರಸಿದ್ಧ ಶ್ರೀಶಂಕರ ನಾರಾಯಣ ದೇಗುಲವೂ ನೀರಿನಲ್ಲಿ ಮುಳುಗಿದೆ. ಜಿಲ್ಲೆಯಾದ್ಯಂತೆ ಸೋಮವಾರ ರಾತ್ರಿಯಿಂದ ವ್ಯಾಪಕ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಬಂಟ್ವಾಳ ತಾಲ್ಲೂಕಿನ ಸಾರಡ್ಕ ಚೆಕ್​ಪೋಸ್ಟ್​ ಬಳಿ ಗುಡ್ಡ ಕುಸಿದಿದ್ದು, ಸ್ಥಳೀಯ ಆಡಳಿತ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ನದಿ-ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಸಮುದ್ರದ ಅಬ್ಬರ ಹೆಚ್ಚಾಗಿದೆ. ಕೇರಳದಲ್ಲಿರುವ ಕನ್ನಡ ಭಾಷಿಕ ಜಿಲ್ಲೆ ಕಾಸರಗೋಡಿನ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಾಸರಗೋಡು ನಗರದಲ್ಲಿಯೂ ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಬ್ರಹ್ಮಾವರ ತಾಲೂಕಿನಲ್ಲೂ ವ್ಯಾಪಕ ಮಳೆಯಾಗಿದ್ದು, ಸೀತಾ ನದಿ ತುಂಬಿ ಹರಿಯುತ್ತಿದೆ. ಬ್ರಹ್ಮಾವರದ ಮಟಪಾಡಿ, ನೀಲಾವರ, ಹನೇಹಳ್ಳಿ ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಟಪಾಡಿಯ ಭತ್ತದ ಗದ್ದೆಗಳಲ್ಲಿ ನೆರೆ ನೀರು ನಿಂತಿದೆ. ತೆಂಗಿನ ತೋಟಗಳಿಗೆ ನದಿ ನೀರು ನುಗ್ಗಿದೆ. ಕಡಲ ಕೊರೆತದ ಸಮಸ್ಯೆಯೂ ಕಾಣಿಸಿಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಸರಾಸರಿ 84 ಮಿಮೀ ಮಳೆ ದಾಖಲಾಗಿದೆ. ಕಾರ್ಕಳ 77, ಹೆಬ್ರಿ 142, ಕುಂದಾಪುರ 78, ಬೈಂದೂರು 68, ಉಡುಪಿ 59, ಬ್ರಹ್ಮಾವರ 86, ಕಾಪು 57 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಸರಾಸರಿ 100 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಿರುವ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್​ ಮುಂದುವರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...