Thursday, February 13, 2025
Thursday, February 13, 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ:ಆರೇಂಜ್ ಅಲರ್ಟ್

Date:

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದೆ .

ಕುಂಬಳೆಯ ಪ್ರಸಿದ್ಧ ಶ್ರೀಶಂಕರ ನಾರಾಯಣ ದೇಗುಲವೂ ನೀರಿನಲ್ಲಿ ಮುಳುಗಿದೆ. ಜಿಲ್ಲೆಯಾದ್ಯಂತೆ ಸೋಮವಾರ ರಾತ್ರಿಯಿಂದ ವ್ಯಾಪಕ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಬಂಟ್ವಾಳ ತಾಲ್ಲೂಕಿನ ಸಾರಡ್ಕ ಚೆಕ್​ಪೋಸ್ಟ್​ ಬಳಿ ಗುಡ್ಡ ಕುಸಿದಿದ್ದು, ಸ್ಥಳೀಯ ಆಡಳಿತ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ನದಿ-ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಸಮುದ್ರದ ಅಬ್ಬರ ಹೆಚ್ಚಾಗಿದೆ. ಕೇರಳದಲ್ಲಿರುವ ಕನ್ನಡ ಭಾಷಿಕ ಜಿಲ್ಲೆ ಕಾಸರಗೋಡಿನ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಾಸರಗೋಡು ನಗರದಲ್ಲಿಯೂ ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಬ್ರಹ್ಮಾವರ ತಾಲೂಕಿನಲ್ಲೂ ವ್ಯಾಪಕ ಮಳೆಯಾಗಿದ್ದು, ಸೀತಾ ನದಿ ತುಂಬಿ ಹರಿಯುತ್ತಿದೆ. ಬ್ರಹ್ಮಾವರದ ಮಟಪಾಡಿ, ನೀಲಾವರ, ಹನೇಹಳ್ಳಿ ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಟಪಾಡಿಯ ಭತ್ತದ ಗದ್ದೆಗಳಲ್ಲಿ ನೆರೆ ನೀರು ನಿಂತಿದೆ. ತೆಂಗಿನ ತೋಟಗಳಿಗೆ ನದಿ ನೀರು ನುಗ್ಗಿದೆ. ಕಡಲ ಕೊರೆತದ ಸಮಸ್ಯೆಯೂ ಕಾಣಿಸಿಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಸರಾಸರಿ 84 ಮಿಮೀ ಮಳೆ ದಾಖಲಾಗಿದೆ. ಕಾರ್ಕಳ 77, ಹೆಬ್ರಿ 142, ಕುಂದಾಪುರ 78, ಬೈಂದೂರು 68, ಉಡುಪಿ 59, ಬ್ರಹ್ಮಾವರ 86, ಕಾಪು 57 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಸರಾಸರಿ 100 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಿರುವ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್​ ಮುಂದುವರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education and Literacy ಸಚಿವ ಮಧು ಬಂಗಾರಪ್ಪ‌‌‌ ಅವರ ಜಿಲ್ಲಾ ಪ್ರವಾಸ ಮಾಹಿತಿ

Department of School Education and Literacy ಶಾಲಾ ಶಿಕ್ಷಣ ಮತ್ತು...

Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ‌ ಮಧು‌‌ ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ

Indian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ...

Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ‌ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ

Mankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ...