Saturday, February 8, 2025
Saturday, February 8, 2025

ಕೇಂದ್ರ ಸಚಿವ ಅಬ್ಬಾಸ್ ನಖ್ವಿ ರಾಜಿನಾಮೆ

Date:

ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ

ರಾಜ್ಯಸಭಾ ಸದಸ್ಯತ್ವ ಜುಲೈ 7 ರಂದು ಕೊನೆಗೊಳ್ಳಲಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನು ಸಾಂವಿಧಾನಿಕ ಅವಶ್ಯಕತೆಗಳನ್ನು ಅನುಸರಿಸಬೇಕಾಗಿತ್ತು ಎಂದು ಮೋದಿ ಸರ್ಕಾರದಲ್ಲಿ ಮುಸ್ಲಿಂ ಮುಖವಾಗಿದ್ದ ನಖ್ವಿ ತಿಳಿಸಿದ್ದಾರೆ.

ರಾಜ್ಯಸಭೆಗೆ ಮರು ನಾಮನಿರ್ದೇಶನ ಪಡೆಯುವಲ್ಲಿ ವಿಫಲರಾದ ಉಕ್ಕು ಸಚಿವ ಆರ್‌.ಸಿ.ಪಿ. ಸಿಂಗ್ ಕೂಡ ತಮ್ಮ ಸ್ಥಾನ ತೊರೆದಿದ್ದಾರೆ. ಮೇಲ್ಮನೆಯಲ್ಲಿ ಅವರ ಅಧಿಕಾರಾವಧಿಯೂ ಗುರುವಾರ ಕೊನೆಗೊಳ್ಳಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಎನ್‌.ಡಿ.ಎ. ಮಿತ್ರಪಕ್ಷವಾದ ಜನತಾ ದಳ ನಾಯಕ ಸಿಂಗ್, ಅವರ ಪಕ್ಷದಿಂದ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಟಿಕೆಟ್ ನಿರಾಕರಿಸಲಾಗಿತ್ತು.

ರಾಜ್ಯಸಭೆಯಲ್ಲಿ ನಖ್ವಿ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದಂತೆ, ನರೇಂದ್ರ ಮೋದಿ ಸರ್ಕಾರದಲ್ಲಿ ಬಿಜೆಪಿಗೆ ಮುಸ್ಲಿಂ ಪ್ರಾತಿನಿಧ್ಯವಿಲ್ಲದಂತಾಗಿದೆ.

ನಖ್ವಿ ಅವರ ಭವಿಷ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲಾಗದ್ದರೂ, ಉಪ ರಾಷ್ಟ್ರಪತಿ ಸ್ಥಾನಕ್ಕೆ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ವದಂತಿಗಳು ಹರಡಿವೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...