Monday, May 19, 2025
Monday, May 19, 2025

ಸರ್ಕಾರಿ ಶಾಲೆಗೆ ಮಕ್ಕಳನ್ನ ಸೇರಿಸಿರುವ ಐಎಎಸ್ ಅಧಿಕಾರಿ

Date:

ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದ ಎಂಡಿ ಎನ್. ಪ್ರಭಾಕರ ರೆಡ್ಡಿ ಅವರು ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವಿಜಯವಾಡದಲ್ಲಿರುವ ಪಟಮಟಾ ಕೊನೇರು ಬಸವಯ್ಯ ಚೌಧರಿ ಜಿಲ್ಲಾ ಪರಿಷತ್ ಪ್ರೌಢಶಾಲೆಗೆ ತಮ್ಮ ಇಬ್ಬರು ಮಕ್ಕಳನ್ನು ಸೇರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಕಾರ್ಪೊರೇಟ್ ಸ್ಟೈಲಿನ ಶಾಲೆಗಳಿಗೆ ಕಳುಹಿಸಲು ಆದ್ಯತೆ ನೀಡುತ್ತಾರೆ. ಆದರೆ ಇವರು ಇದಕ್ಕೆ ತದ್ವಿರುದ್ಧವಾಗಿ ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ.

ಅನೇಕರು ಫೀಸು ಕಟ್ಟಲು ಹಣಕಾಸು ಶಕ್ತಿ ಇಲ್ಲದಿದ್ದರೂ ಸಾಲ ಮಾಡಿ, ಪ್ರೈವೇಟ್ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಾರೆ. ಆದರೆ ವಿಜಯವಾಡದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಈ ಹಿಂದೆ ನೆಲ್ಲೂರು ಜಿಲ್ಲೆಯ ಜಂಟಿ ಕಲೆಕ್ಟರ್ ಆಗಿದ್ದ ಅವಧಿಯಲ್ಲಿ ಕೂಡ ಪ್ರಭಾಕರ ರೆಡ್ಡಿ, ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿಯೇ ಓದಿಸಿದ್ದರು. ಆಗ ಪ್ರಭಾಕರ ರೆಡ್ಡಿ ಅವರ ಪತ್ನಿ ಲಕ್ಷ್ಮಿ ತಮ್ಮ ಇಬ್ಬರು ಮಕ್ಕಳೊಂದಿಗೆ ಶಾಲೆಗೆ ಬಂದು ಅಡ್ಮಿಷನ್ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಅವರು, ಶಾಲೆಯಲ್ಲಿ ಸೌಲಭ್ಯ, ತರಗತಿ ಕೊಠಡಿ, ಆಟದ ಮೈದಾನ ಎಲ್ಲವೂ ಉತ್ತಮವಾಗಿವೆ. ಈ ಶಾಲೆಯಲ್ಲಿ ಮಗನಿಗೆ ಆರನೇ ತರಗತಿಗೆ ಮತ್ತು ಮಗಳಿಗೆ 8ನೇ ತರಗತಿಗೆ ಪ್ರವೇಶ ತೆಗೆದುಕೊಂಡಿದ್ದೇವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...