Thursday, February 13, 2025
Thursday, February 13, 2025

ಸರ್ಕಾರಿ ಶಾಲೆಗೆ ಮಕ್ಕಳನ್ನ ಸೇರಿಸಿರುವ ಐಎಎಸ್ ಅಧಿಕಾರಿ

Date:

ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದ ಎಂಡಿ ಎನ್. ಪ್ರಭಾಕರ ರೆಡ್ಡಿ ಅವರು ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವಿಜಯವಾಡದಲ್ಲಿರುವ ಪಟಮಟಾ ಕೊನೇರು ಬಸವಯ್ಯ ಚೌಧರಿ ಜಿಲ್ಲಾ ಪರಿಷತ್ ಪ್ರೌಢಶಾಲೆಗೆ ತಮ್ಮ ಇಬ್ಬರು ಮಕ್ಕಳನ್ನು ಸೇರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಕಾರ್ಪೊರೇಟ್ ಸ್ಟೈಲಿನ ಶಾಲೆಗಳಿಗೆ ಕಳುಹಿಸಲು ಆದ್ಯತೆ ನೀಡುತ್ತಾರೆ. ಆದರೆ ಇವರು ಇದಕ್ಕೆ ತದ್ವಿರುದ್ಧವಾಗಿ ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ.

ಅನೇಕರು ಫೀಸು ಕಟ್ಟಲು ಹಣಕಾಸು ಶಕ್ತಿ ಇಲ್ಲದಿದ್ದರೂ ಸಾಲ ಮಾಡಿ, ಪ್ರೈವೇಟ್ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಾರೆ. ಆದರೆ ವಿಜಯವಾಡದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಈ ಹಿಂದೆ ನೆಲ್ಲೂರು ಜಿಲ್ಲೆಯ ಜಂಟಿ ಕಲೆಕ್ಟರ್ ಆಗಿದ್ದ ಅವಧಿಯಲ್ಲಿ ಕೂಡ ಪ್ರಭಾಕರ ರೆಡ್ಡಿ, ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿಯೇ ಓದಿಸಿದ್ದರು. ಆಗ ಪ್ರಭಾಕರ ರೆಡ್ಡಿ ಅವರ ಪತ್ನಿ ಲಕ್ಷ್ಮಿ ತಮ್ಮ ಇಬ್ಬರು ಮಕ್ಕಳೊಂದಿಗೆ ಶಾಲೆಗೆ ಬಂದು ಅಡ್ಮಿಷನ್ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಅವರು, ಶಾಲೆಯಲ್ಲಿ ಸೌಲಭ್ಯ, ತರಗತಿ ಕೊಠಡಿ, ಆಟದ ಮೈದಾನ ಎಲ್ಲವೂ ಉತ್ತಮವಾಗಿವೆ. ಈ ಶಾಲೆಯಲ್ಲಿ ಮಗನಿಗೆ ಆರನೇ ತರಗತಿಗೆ ಮತ್ತು ಮಗಳಿಗೆ 8ನೇ ತರಗತಿಗೆ ಪ್ರವೇಶ ತೆಗೆದುಕೊಂಡಿದ್ದೇವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...

Shri Sewalal Jayanti ಶ್ರೀ ಸೇವಾಲಾಲ್ ಜಯಂತಿಗೆ ಸರ್ವ ಸಿದ್ಧತೆ

Shri Sewalal Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,...

MESCOM ಫೆ.15. ಮಾಚೇನಹಳ್ಳಿ‌‌ ಸುತ್ತಮುತ್ತ ವಿದ್ಯುತ್ಸರಬರಾಜು ವ್ಯತ್ಯಯ

MESCOM ಫೆ. 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6...