Friday, May 29, 2026
Friday, May 29, 2026

ಭದ್ರಾ ಜಲಾಶಯ ನೀರಿನ ಮಟ್ಟ

Date:

ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯ ಪ್ರದೇಶ ಸುತ್ತಮುತ್ತ ಮಳೆ‌ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದು, ಒಳಹರಿವು ಸ್ವಲ್ಪ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ (ಜು.05) 30,167 ಕ್ಯೂಸೆಕ್ ಒಳ ಹರಿವು ಇತ್ತು. ಇಂದು (ಜು.06) 26,004 ಕ್ಯೂಸೆಕ್ ಒಳ ಹರಿವಿದ್ದು, ಸ್ವಲ್ಪ ತಗ್ಗಿದೆ. ಇಂದಿನ ನೀರಿನ ಮಟ್ಟ 160.11 ಅಡಿಗೆ ತಲುಪಿದೆ. ನಿನ್ನೆ 158.06 ಅಡಿ ಇತ್ತು.
ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಳವಾಗಿದೆ.

ಈ ಮಳೆ ಮುಂಗಾರು ಹಂಗಾಮಿನ ಭತ್ತ ಬೆಳೆಯುವ ರೈತರ ಸಂತಸಕ್ಕೆ ಕಾರಣವಾಗಿದ್ದು, ಭತ್ತ ನಾಟಿಗೆ ಬೀಜ ಚೆಲ್ಲುವ ಕಾರ್ಯ ನಡೆಯುತ್ತಿದೆ.
ನೀರಿನ ಸಂಗ್ರಹದ ವಿವರ ಹೀಗಿದೆ.
ಇಂದಿನ ನೀರಿನ ಮಟ್ಟ 160.11 ಅಡಿ
ಪೂರ್ಣ ಮಟ್ಟ:186 ಅಡಿ
ಇಂದಿನ ಸಾಮರ್ಥ್ಯ: 43.771 ಟಿಎಂಸಿ
ಒಟ್ಟು ಸಾಮರ್ಥ್ಯ:71.535 ಟಿಎಂಸಿ
ಒಳಹರಿವು: 26004 ಕ್ಯೂಸೆಕ್
ಒಟ್ಟು ಹೊರಹರಿವು: 136 ಕ್ಯೂಸೆಕ್
ಬಲದಂಡೆ ನಾಲೆ: 0.00 ಕ್ಯೂಸೆಕ್
ಎಡದಂಡೆ ನಾಲೆ: 0.00ಕ್ಯೂಸೆಕ್
ಕಳೆದ ವರ್ಷ ಈ ದಿನ : 155.34 ಅಡಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

High Court ಶಿವಮೊಗ್ಗದಲ್ಲೇ ಹೈಕೊರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲಿ- ಡಿ.ಜಿ.ನಾಗರಾಜ್.

High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ...

Gruhalakshmi Yojana ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿಯಿರುವ ಪ್ರಕರಣತಕ್ಷಣ ಇತ್ಯರ್ಥ ಪಡಿಸಿ- ಎಚ್.ಎಂ.ಮಧು.

Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ...

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ...