Friday, May 29, 2026
Friday, May 29, 2026

ನಿವೃತ್ತ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ- ಬೊಮ್ಮಾಯಿ

Date:

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಮೂಲಕ ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಿವೃತ್ತ ನೌಕರರು ನಿರಂತರವಾಗಿ ಕ್ರಿಯಾಶೀಲರಾಗಿದ್ದಾರೆ.ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮಾನವೀಯತೆ ಇರುವ ನೌಕರರಿದ್ದರೆ ಬಡವರ ಕಷ್ಟ ಕಾರ್ಪಣ್ಯ ದೂರ ಮಾಡಲು ಸಾಧ್ಯ. ಇದರ ತಳಹದಿಯ ಮೇಲೆ ಆಡಳಿತ ನಡೆಯಬೇಕು. ಮತ್ತೊಬ್ಬರ ಬಗ್ಗೆ ಪ್ರೀತಿ, ವಿಶ್ವಾಸ, ಅನುಕಂಪವಿದ್ದಾಗ ನ್ಯಾಯ ಕೊಡಲು ಸಾಧ್ಯ. 6 ಕೋಟಿಗಿಂತ ಹೆಚ್ಚು ಜನಸಂಖ್ಯೆ ನಮ್ಮ ಕೈಗೆ ಜವಾಬ್ದಾರಿ ಕೊಟ್ಟಿದೆ. 6 ಲಕ್ಷಕ್ಕೂ ಹೆಚ್ಚಿರುವ ಸರ್ಕಾರಿ ನೌಕರರು ಹಾಗೂ ಆಡಳಿತ ಮಾಡುವ ಜನಪ್ರತಿನಿಧಿಗಳ ಕೈಯಲ್ಲಿ ಜವಾಬ್ದಾರಿ ಇದೆ. ನಾವೆಲ್ಲ ಜನರ ವಿಶ್ವಾಸದ ಟ್ರಸ್ಟಿಗಳು. ನಮ್ಮ ಮೇಲಿರುವ ವಿಶ್ವಾಸಕ್ಕೆ ಅರ್ಹರಾಗಿ ನಾವು ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

High Court ಶಿವಮೊಗ್ಗದಲ್ಲೇ ಹೈಕೊರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಲಿ- ಡಿ.ಜಿ.ನಾಗರಾಜ್.

High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ...

Gruhalakshmi Yojana ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿಯಿರುವ ಪ್ರಕರಣತಕ್ಷಣ ಇತ್ಯರ್ಥ ಪಡಿಸಿ- ಎಚ್.ಎಂ.ಮಧು.

Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ...

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ...