Monday, December 15, 2025
Monday, December 15, 2025

ರಾಜ್ಯದಲ್ಲಿ ಭಾರೀ ಮಳೆ: ಮುನ್ನೆಚ್ಚರಿಕೆ ಬಗ್ಗೆ ಸೀಎಂ ಅವರಿಂದ ವಿಡಿಯೋ ಸಂವಾದ

Date:

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ ಮೂರು ನಾಲ್ಕು ದಿನಗಳಿಂದ ಮಲೆನಾಡು, ಕರಾವಳಿ, ಹಾಗೂ ಬಯಲು ಸೀಮೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ ಇದರಿಂದ ಜನ, ಜಾನುವಾರುಗಳಿಗೆ ತೊಂದರೆಯಾಗಿದೆ.
13 ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಇದ್ದು, 17 ತಾಲ್ಲೂಕುಗಳಲ್ಲಿ ಮಳೆ ಹಾವಳಿ ಹೆಚ್ಚಾಗಿದೆ. ಇದುವರೆಗೂ ಜೂನ್ 1 ರಿಂದ ಈವರೆಗೆ 12 ಜನ ಮೃತಪಟ್ಟಿದ್ದು, 65 ಜಾನುವಾರುಗಳಿಗೆ ಜೀವಹಾನಿಯಾಗಿದೆ ಎಂದು ತಿಳಿಸಿದರು.

ಮನೆ ಹಾನಿಯಾದಲ್ಲಿ ಭಾಗಶಃ ಅಥವಾ ನೀರು ನುಗ್ಗಿರುವ ಮನೆಗಳಿಗೆ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ನೀಡುವಂತೆ ಆದೇಶ ಮಾಡಲಾಗಿದೆ. ನಂತರ ಹಾನಿ ಪ್ರಮಾಣವನ್ನು ವರದಿಯನ್ನು 2-3 ದಿನಗಳಲ್ಲಿ ಜಿಲ್ಲಾ ಪಂಚಾಯತ್ ನ ಇಂಜಿನಿಯರ್ ಗಳಿಂದ ಪಡೆದು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಮಳೆ ಪ್ರಮಾಣ ಕಡಿಮೆಯಾದ ನಂತರ ಬೆಳೆ ಹಾನಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಲು ಪಡೆದು ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳವಂತೆ, ಸೂಚಿಸಲಾಯಿತು.

ಉಸ್ತುವಾರಿ ಸಚಿವರೊಂದಿಗಿನ ವೀಡಿಯೋ ಸಂವಾದದಲ್ಲಿ ಭೂ-ಕುಸಿತ ಉಂಟಾಗಿರುವ ಸ್ಥಳಗಳಲ್ಲಿ ಕೆಳಭಾಗದಲ್ಲಿರುವ ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಕೆಲವೆಡೆಗಳಲ್ಲಿ ಸಂಪೂರ್ಣ ಭೂಕುಸಿತವಾಗಿಲ್ಲ. ಭೂಮಿ ಸ್ವಲ್ಪ ಕುಸಿದಿದ್ದು ರಸ್ತೆ ಸಂಚಾರ ಸ್ಥಗಿತವಾಗಿದೆ. ಅದನ್ನು ಟಾಸ್ಕ್ ಪೋರ್ಸ್ ಗಳನ್ನು ರಚಿಸಿ ಕೂಡಲೇ ತೆರವುಗೊಳಿಸಲು ಸೂಚನೆ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ರಸ್ತೆ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಂಡು ಸಂಚಾರ ಸಂಪರ್ಕ ಸಮರ್ಪಕವಾಗಿರುವಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದು, ಹಾನಿಯಾದ ಪ್ರಮಾಣದ ವರದಿಯನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ಸರಬರಾಜು ಅಡಚಣೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ. ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ತಾತ್ಕಾಲಿಕವಾಗಿ ಕಡಲ ಕೊರೆತ ಆಗದಂತೆ ಕ್ರಮವಹಿಸಬೇಕು. ರಸ್ತೆಗಳು ಕೊರೆತ ಆಗಿದ್ದು, ಅವುಗಳನ್ನು ಪುನಃಸ್ಥಾಪಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ತಿಳಿಸಲಾಗಿದೆ.

ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಮನ್ವಯದೊಂದಿಗೆ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ರಚಿಸಿ, ನೇರ ಸಂಪರ್ಕ ಹೊಂದಲು ತಿಳಿಸಲಾಗಿದೆ. ನಿಯಂತ್ರಣ ಕೊಠಡಿ ಸ್ಥಾಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸೂಚಿಸಲಾಯಿತು. ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯರಿರಬೇಕು ಎಂದು ತಿಳಿಸಿದರು.

ಈ ಬಾರಿ ಸರ್ಕಾರವು ಶಾಶ್ವತವಾಗಿ ಕಡಲ ಕೊರೆತ ಆಗದಂತೆ ಒಂದು ವಿಶೇಷ ತಂತ್ರಜ್ಞಾನದ ಮೂಲಕ ತೆಡೆದು ಇನ್ನು ಮುಂದೆ ಶಾಶ್ವತ ಕಡಲ ಕೊರೆತ ಆಗದ ರೀತಿಯಲ್ಲಿ ಕ್ರಮವಹಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...