ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯು ಸಲಹೆಯನ್ನ ನೀಡಿದ್ದು, ದೇಶದಲ್ಲಿ ಕೆಲಸ ಮಾಡುವವರಿಗೆ ವಯಸ್ಸಿನ ಮಿತಿಯನ್ನ ಹೆಚ್ಚಿಸಬೇಕು ಎಂದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನ ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನೂ ಆರಂಭಿಸಬೇಕು ಎಂದು ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿ ಹೇಳಿದೆ.
ವರದಿಯ ಪ್ರಕಾರ, ಈ ಸಲಹೆಯ ಅಡಿಯಲ್ಲಿ ಪ್ರತಿ ತಿಂಗಳು ನೌಕರರಿಗೆ ಕನಿಷ್ಠ 2,000 ರೂ.ಗಳ ಪಿಂಚಣಿ ನೀಡಬೇಕು. ಇನ್ನು ಆರ್ಥಿಕ ಸಲಹಾ ಸಮಿತಿಯು ದೇಶದ ಹಿರಿಯ ನಾಗರಿಕರ ಸುರಕ್ಷತೆಗಾಗಿ ಉತ್ತಮ ವ್ಯವಸ್ಥೆಗಳನ್ನ ಶಿಫಾರಸು ಮಾಡಿದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ನೀತಿಗಳನ್ನು ರೂಪಿಸಿ ಕೌಶಲ್ಯಾಭಿವೃದ್ಧಿ ಮಾಡುವಂತೆ ವರದಿಯಲ್ಲಿ ತಿಳಿಸಲಾಗಿದೆ. ಈ ಪ್ರಯತ್ನವು ಅಸಂಘಟಿತ ವಲಯದಲ್ಲಿ ವಾಸಿಸುವ, ದೂರದ ಪ್ರದೇಶಗಳಲ್ಲಿ, ನಿರಾಶ್ರಿತರು, ತರಬೇತಿ ಪಡೆಯಲು ದಾರಿಯಿಲ್ಲದ ವಲಸಿಗರನ್ನು ಒಳಗೊಂಡಿರಬೇಕು, ಆದರೆ ಅವರಿಗೆ ತರಬೇತಿ ನೀಡಬೇಕು ಎಂದಿದೆ.