Wednesday, December 10, 2025
Wednesday, December 10, 2025

ರಾಷ್ಟ್ರಪತಿ ಹುದ್ದೆ ಅಭ್ಯರ್ಥಿ ದ್ರೌಪದಿ ಮುರ್ಮು ರಾಜ್ಯಕ್ಕೆ ಭೇಟಿ

Date:

ಬಿಜೆಪಿ ಬೆಂಬಲಿತ ಎನ್‍ಡಿಎ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆ ಕಣಕ್ಕಿಳಿದಿರುವ ದ್ರೌಪದಿ ಮುರ್ಮು ಅವರು ಮತ ಯಾಚನೆಗಾಗಿ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರಿನ ಶಾಂಘ್ರಿಲಾ ಹೋಟೆಲ್‍ನಲ್ಲಿ ಸಭೆ ನಡೆಯಲಿದ್ದು, ರಾಷ್ಟ್ರಪತಿ ಚುನಾವಣಾ ಸಂದರ್ಭದಲ್ಲಿ ತಮಗೆ ಮತ ಹಾಕಬೇಕೆಂದು ದ್ರೌಪದಿ ಮುರ್ಮು ಅವರು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಮೊದಲ ಬಾರಿಗೆ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಅವರನ್ನು ವಿಶಿಷ್ಟವಾಗಿ ಬರಮಾಡಿಕೊಳ್ಳಲು ತೀರ್ಮಾನಿಸಿದೆ.

ಈಗಾಗಲೇ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದ್ದು, ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಅವರನ್ನು ಸಿಎಂ ಹಾಗೂ ಕೆಲವು ಪ್ರಮುಖ ನಾಯಕರು ಬರಮಾಡಿಕೊಳ್ಳಲಿದ್ದಾರೆ. ನಂತರ 20 ಮಂದಿ ಆದಿವಾಸಿ ಹಾಗೂ ಕಲಾ ತಂಡಗಳು ಅವರನ್ನು ಆದಿವಾಸಿ ಸಂಪ್ರದಾಯದಂತೆ ಸ್ವಾಗತ ಕೋರಲಿದ್ದಾರೆ. ಬಳಿಕ ಶಾಂಘ್ರಿಲಾ ಹೋಟೆಲ್‍ನ ಹೊರಭಾಗದಲ್ಲಿ ಸುಮಾರು 2500 ಮಹಿಳೆಯರು, ಮಹಿಳಾ ಮೋರ್ಚಾ ಬಿಜೆಪಿ ಎಸ್ಸಿ ಘಟಕ, ಹಿಂದುಳಿದ ವರ್ಗಗಳ ಘಟಕ ಸೇರಿದಂತೆ ಮತ್ತಿತರರು ವಿಶಿಷ್ಟವಾಗಿ ಬರಮಾಡಿಕೊಳ್ಳಲಿದ್ದಾರೆ.

ಪ್ರಮುಖರ ಜೊತೆ ನಡೆಯುವ ಸಭೆಯಲ್ಲಿ ದ್ರೌಪದಿ ಮುರ್ಮು ಅವರು ಮತಯಾಚನೆ ಮಾಡಲಿದ್ದು, ತಮಗೆ ಮತ ಹಾಕಬೇಕೆಂದು ಪಕ್ಷದ ಎಲ್ಲ ಮುಖಂಡರಿಗೂ ಮನವಿ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಭಗವಂತ ಕೂಬ, ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು ಹಾಜರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...

Good Luck Care Center ದಾನದಿಂದ ತೃಪ್ತಿ ಸಿಗುತ್ತದೆ- ಹೇಮಾ ಬಿ.ಜಿ.ಗೋಣೂರು

ನಾವು ಮಾಡಿದ ಸೇವೆ ದಾನ ಧರ್ಮ ನಮಗೆ ಒಂದಲ್ಲ ಒಂದು ರೀತಿಯಿಂದ...