Thursday, May 22, 2025
Thursday, May 22, 2025

ಪ್ರಾಕೃತಿಕ ವಿಕೋಪ: ಮನೆ ಹಾನಿಗೆ ₹5 ಲಕ್ಷದ ವರೆಗೆ ಪರಿಹಾರ-ಅಶೋಕ್

Date:

ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು.
ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದ 13 ಜಲಾಶಯಗಳಲ್ಲಿ 800 ಟಿಎಂಸಿ ನೀರು ಇದ್ದು, ಜಲಾಶಯದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸದೆ ನದಿಗೆ ನೀರು ಬಿಡುವಂತಾಗಲು ಕ್ರಮವಹಿಸಲಾಗಿದೆ. ಹಾಗೆಯೇ ಹೆಚ್ಚಿನ ಮಳೆಯಾಗುತ್ತಿರುವ ಏಳು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ನಿರಂತರ ಸಂಪರ್ಕ ಸಾಧಿಸಿ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗದಂತೆ ಗಮನಹರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 18 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಉಳಿದಂತೆ ಇಲ್ಲಿಯ ವರೆಗೆ ಮೂರು ಜಿಲ್ಲೆಗಳಲ್ಲಿ (ಕೊಡಗು, ಹಾವೇರಿ, ಶಿವಮೊಗ್ಗ) ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಸದ್ಯ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು. ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದ ಯಾವ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ, ಜಾನುವಾರು ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ನೀರು,ಗಾಳಿ ಬೆಂಕಿಯೊಂದಿಗೆ ಸರಸ ಬೇಡ. ತರಬೇತಿದಾರರ ಮಾರ್ಗದರ್ಶನದಲ್ಲಿಚಾರಣ ಮಾಡಿ- ಎಸ್.ಎಸ್.ವಾಗೇಶ್

Shimoga News ನೀರನ್ನು ಗೌರವಿಸಿ, ಭಯ ಬೇಡ ಪ್ರಕೃತಿದತ್ತ ಕೊಡುಗೆಗಳನ್ನು ನಾವೆಲ್ಲರೂ...

DAP Fertilizer ಡಿಎಪಿ ರಸಗೊಬ್ಬರಕ್ಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಲು ಕೃಷಿ‌ ಇಲಾಖೆ ಪ್ರಕಟಣೆ

DAP Fertilizer ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ....

Ayanur Manjunath ಶಿವಮೊಗ್ಗ ಆತಿಥ್ಯಕ್ಕೆ ಹೆಸರಾಗಿದೆ.ಕ್ರೀಡಾಕೂಟದಲ್ಲಿ ಪಾಲ್ಗೊಂಡವರೆಲ್ಲರೂ ಸದಾ ನೆನಪಲ್ಲಿರುವಂತೆ ಆಗಿದೆ- ಆಯನೂರು‌‌ ಮಂಜುನಾಥ್

Ayanur Manjunath ಮಲೆನಾಡು ರಾಜ್ಯದಲ್ಲಿಯೇ ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಕೂಟಕ್ಕೆ ರಾಜ್ಯದ...