Thursday, April 23, 2026
Thursday, April 23, 2026

ಸಭೆಗೆ ಗೈರಾದ ಅಧಿಕಾರಿ ಬಗ್ಗೆ ತೀವ್ರ ಕ್ರಮ-ಸಚಿವ ನಾರಾಯಣ ಸ್ವಾಮಿ

Date:

ಮತ್ತೆ ಸಂಸದನಾಗುವ ಆಸೆ ನನಗಿಲ್ಲ. ಇದೇ ಆಡಳಿತ ವ್ಯವಸ್ಥೆ ಮುಂದುವರಿದರೆ ಜನ ಬೀದಿಗೆ ಬೀಳುತ್ತಾರೆ. ಉದ್ದಟತನದ ಪರಮಾವಧಿ ತಲುಪಿರುವ ಅಧಿಕಾರಿಗಳಿಗೆ ಪ್ರಜಾಪ್ರಭುತ್ವ ಏನು ಎಂಬುದನ್ನು ತೋರಿಸುವೆ ನಿದ್ದೆಯಲ್ಲಿಯೂ ಕಾಡುವೆ ಎಂದು ಸಚಿವ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಮಾಹಿತಿ ಪಡೆಯುವ ವೇಳೆ ಹೊಸದುರ್ಗ ಭದ್ರಾ ಮೇಲ್ದಂಡೆ ವಿಭಾಗದ ಎಂಜಿನಿಯರ್‌ ಸಭೆಯಲ್ಲಿ ಇರಲಿಲ್ಲ. ಇದರಿಂದ ಕೆಂಡಾಮಂಡಲರಾದ ಸಚಿವರು ಸಭೆಗೆ ಗೈರು ಹಾಜರಾದವರಿಗೆ ನೋಟಿಸ್‌ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ವರದಿ ರವಾನಿಸಿ ಶಿಸ್ತುಕ್ರಮಕ್ಕೆ ಸೂಚಿಸಿದ್ದಾರೆ.

ನನ್ನ ಆಡಳಿತ ವೈಖರಿ ಭಿನ್ನ. ರಾಜಕಾರಣಿಗಳ ಶ್ರೀರಕ್ಷೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು ವ್ಯಾಪ್ತಿಯಲ್ಲಿ ಅತ್ಯಂತ ಸೌಮ್ಯವಾಗಿ ವರ್ತಿಸುತ್ತಿದ್ದೇನೆ. ಸರಿಯಾಗಿ ಕೆಲಸ ಮಾಡದೇ ತಾಳ್ಮೆ ಪರೀಕ್ಷೆ ಮಾಡುತ್ತಿದ್ದೀರಿ. ಇದರಿಂದ ಜಿಲ್ಲಾಡಳಿತಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅವರು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಭದ್ರಾ ಮೇಲ್ದಂಡೆ ನಾಲೆಯ ವೈ ಜಂಕ್ಷನ್‌ ಬಳಿ ನಿರೀಕ್ಷಿತ ರೀತಿಯಲ್ಲಿ ಕೆಲಸ ನಡೆಯುತ್ತಿಲ್ಲ. ಕಾಮಗಾರಿ ಮುಂದುವರಿಸಲು ಪೊಲೀಸ್‌ ಭದ್ರತೆಯ ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿ ಗಮನ ಸೆಳೆದಿದ್ದೇನೆ. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬದ್ಧತೆಯಿಂದ ಕೆಲಸ ಮಾಡುವುದಾರೆ ಸಹಿಸಿಕೊಳ್ಳುವೆ. ಇಲ್ಲವಾದರೆ ಜಿಲ್ಲೆಯಿಂದ ಹೊರಹೋಗಿ ಎಂದು ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....