Monday, December 15, 2025
Monday, December 15, 2025

ಕುವೆಂಪು ವಿವಿಯಲ್ಲಿ ಇ-ಗವರ್ನೆನ್ಸ್ ಘಟಕ: ಎನ್ಇಪಿ ಸಮಸ್ಯೆಗೆ ಪರಿಹಾರ

Date:

ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಜುಲೈ 01ರಿಂದಲೇ ಪ್ರಾರಂಭವಾಗಿದ್ದು, ಜು. 30ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇಲಾಖೆಯಡಿ ಬರುವ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ ಮತ್ತು ಅನುದಾನರಹಿತ ಕಾಲೇಜುಗಳಿಗೆ ಈ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕುವೆಂಪು ವಿಶ್ವವಿದ್ಯಾಲಯವು ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಳವಡಿಸಿಕೊಂಡಿದ್ದು, ವಿವಿ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪದವಿ ಕಾಲೇಜುಗಳಲ್ಲಿ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಜುಲೈ 01ರಿಂದಲೇ ಪ್ರಾರಂಭಿಸಲು ಈಗಾಗಲೇ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದ್ದಾರೆ.

ಎಲ್ಲ ಪ್ರವೇಶ ಪ್ರಕ್ರಿಯೆಗಳು ಕರ್ನಾಟಕ ಸರ್ಕಾರದ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಪೋರ್ಟಲ್ ಮೂಲಕ ನಡೆಯಲಿದ್ದು, ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚಿನ ಶೈಕ್ಷಣ ಕ ಸಂಸ್ಥೆಗಳಲ್ಲಿ ಪ್ರವೇಶ ಕೋರಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪ್ರತಿ ಕಾಲೇಜುಗಳ ಹಂತದಲ್ಲಿ UUCMS ಹೆಲ್ಪ್ ಡೆಸ್ಕ್ ಗಳನ್ನು ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಸಂಬಂಧ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಿಕೊಳ್ಳಬಹುದು.

ಇನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ-ಗವರ‍್ನೆನ್ಸ್ ಘಟಕ ಸ್ಥಾಪಿಸಲಾಗಿದ್ದು, ಎನ್‌ಇಪಿ ಪ್ರವೇಶ ಪ್ರಕ್ರಿಯೆಯ ಯಾವುದೇ ಗೊಂದಲಗಳಿದ್ದರೂ ನಿಭಾಯಿಸಲು ಸನ್ನದ್ಧವಾಗಿದೆ. ಹೆಚ್ಚಿನ ಮಾಹಿತಿಗೆ ಘಟಕದ ಮುಖ್ಯಸ್ಥ ಪ್ರೊ. ಅಶ್ವಕ್ ಅಹಮದ್ ಅವರನ್ನು (98451-42267) ಸಂಪರ್ಕಿಸಬಹುದು ಎಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...