Friday, September 27, 2024
Friday, September 27, 2024

ನೂತನ ಸಂಸತ್ ಭವನದ ಅಶೋಕ ಚಕ್ರ ಲಾಂಛನ: ಶಿಲ್ಪಿಯ ಸ್ಪಷ್ಟನೆ

Date:

ನವದೆಹಲಿಯಲ್ಲಿ ನಿರ್ಮಿಸಲಾಗಿರುವ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದಾರೆ.

ಲಾಂಛನದಲ್ಲಿರುವ ಸಿಂಹಗಳ ಮುಖಭಾವದ ಕುರಿತು ಪ್ರತಿಪಕ್ಷಗಳ ನಾಯಕರು ತಕರಾರು ತೆಗೆದಿದ್ದಾರೆ.
ಸಿಂಹಗಳ ಮುಖಭಾವದಲ್ಲಿ ಅತಿಯಾದ ವ್ಯಗ್ರತೆ ಇದೆ ಎಂಬುದು ಪ್ರತಿಪಕ್ಷಗಳ ನಾಯಕರ ಆರೋಪವಾಗಿದೆ.

ಅಲ್ಲದೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ಆಹ್ವಾನಿಸಿಲ್ಲ ಎಂಬ ಆಕ್ಷೇಪವೂ ಕೇಳಿ ಬಂದಿದೆ.

ಇದರ ನಡುವೆ ಲಾಂಛನ ನಿರ್ಮಿಸಿರುವ 49 ವರ್ಷದ ಶಿಲ್ಪಿ ಸುನಿಲ್ ಡಿಯೋರಾ ಈಗ ವಿವಾದದ ಕುರಿತು ಸ್ಪಷ್ಟನೆ ನೀಡಿದ್ದು, ಅಲ್ಲಿರುವ ಸಿಂಹಗಳ ಗಾತ್ರಕ್ಕೂ ನೂತನ ಸಂಸತ್ ಭವನದ ಮೇಲಿನ ಬೃಹತ್ ಲಾಂಛನದ ಸಿಂಹಗಳ ಗಾತ್ರಕ್ಕೂ ಭಾರಿ ವ್ಯತ್ಯಾಸವಿದ್ದು, ಆದರೂ ಕೂಡ ಸಿಂಹಗಳ ಮುಖಭಾವದಲ್ಲಿ ಸಾಮ್ಯತೆ ಕಾಪಾಡಿಕೊಳ್ಳಲಾಗಿದೆ.

ತದ್ರೂಪು ಬರುವಂತೆ ನೋಡಿಕೊಳ್ಳಲಾಗಿದ್ದು, ಮನಬಂದಂತೆ ಯಾವುದೇ ಮಾರ್ಪಾಡು ಮಾಡಿಲ್ಲ ಎಂದು ಹೇಳಿದ್ದಾರೆ.

ಸಂಸತ್ ಮೇಲೆ ನಿರ್ಮಾಣವಾಗಿರುವ ಲಾಂಛನದಲ್ಲಿನ ಸಿಂಹಗಳು ವಾರಣಾಸಿ ಬಳಿಯ ಸಾರಾನಾಥದಲ್ಲಿರುವ ಅಶೋಕ ಸ್ಥಂಭದ ಮೇಲಿನ ಸಿಂಹಗಳನ್ನೇ ಹೋಲುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...