Saturday, September 12, 2026
Saturday, September 12, 2026

ಕರಾವಳಿಯಲ್ಲಿ ಮಳೆಹಾನಿ ಪರಿಹಾರದ ಬಗ್ಗೆ ಬೊಮ್ಮಾಯಿ ಸ್ಪಂದನ

Date:

ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದ ಕಾರಣ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ.

ನೆರೆ ಪರಿಹಾರಕ್ಕೆ ಕೂಡಲೇ ಕರಾವಳಿ ಜಿಲ್ಲೆಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

ಮಳೆ ಹಾನಿ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಮಳೆಗೆ ರಾಜ್ಯದಲ್ಲಿ 32 ಜೀವ ಹಾನಿಯಾಗಿದೆ. 5 ಜನ ಕಾಣೆಯಾಗಿದ್ದಾರೆ. 34 ಮಂದಿ ಗಾಯಗೊಂಡಿದ್ದಾರೆ. ಸುಮಾರು 300 ಜನರನ್ನು ರಕ್ಷಿಸಲಾಗಿದೆ. ನಾಲ್ಕು ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ತಂಡಗಳು ಕೆಲಸ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಕರಾವಳಿಯಲ್ಲಿ ಮಳೆಯಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 355 ಹೆಕ್ಟೇರ್ ತೋಟ, ಬೆಳೆ ನಾಶವಾಗಿದೆ. ದಕ್ಷಿಣ ಕನ್ನಡದಲ್ಲಿ 429 ಮನೆಗಳು, ಉತ್ತರ ಕನ್ನಡ ಜಿಲ್ಲೆಯಲ್ಲಿ 437, ಉಡುಪಿಯಲ್ಲಿ 196 ಸೇರಿ 1,062 ಮನೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 727 ಕಿ.ಮೀ, ಉತ್ತರ ಕನ್ನಡ 500 ಕಿ.ಮೀ, ಉಡುಪಿ 960 ಕಿ.ಮೀ ಸೇರಿ 2,187 ಕಿ.ಮೀ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ರಸ್ತೆಗಳು ಹಾನಿಗೊಳಗಾಗಿವೆ. 5,000ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದಿವೆ. 168 ಸೇತುವೆಗಳಿಗೆ ಹಾನಿಯಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಭೂಕಂಪನ, ಭೂಕುಸಿತದ ಕುರಿತು ಅಮೃತ ವಿವಿಯವರು ಅಧ್ಯಯನ ಮಾಡುತ್ತಿದ್ದಾರೆ. ವರದಿ ಬಂದ ಕೂಡಲೇ ಸರ್ಕಾರ ಪರಿಹಾರ ನೀಡಲು ಸಿದ್ಧವಿದೆ. ಕಡಲ್ಕೊರೆತಕ್ಕೆ ಎಡಿಬಿ ಮೂಲಕ 300 ಕೋಟಿ ರೂ ಖರ್ಚಾಗಿದೆ. ಕೇರಳ ಮಾದರಿಯಲ್ಲಿ ಒಂದು ಕಿಲೋಮೀಟರ್ ಕಡಲಿಗೆ ತಡೆಗೋಡೆ ನಿರ್ಮಾಣ ಮಾಡುವ ಚಿಂತನೆ ಇದೆ. ತಡೆಗೋಡೆ ನಿರ್ಮಾಣ ಸಂಬಂಧ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುತ್ತದೆ. ಸರಿಯಾದ ಅಧ್ಯಯನ ಮಾಡಿ ಅನುಷ್ಟಾನ ಮಾಡಲು ತೀರ್ಮಾನ ಮಾಡಲಾಗುತ್ತದೆ. ಶಾಶ್ವತ ಪರಿಹಾರಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...